ಉಡುಪಿ

ಜೆಡಿಎಸ್ ಮೈತ್ರಿ ಸರಕಾರವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ; ಬಿಜೆಪಿ ಗದ್ದುಗೆ ಏರುವವರೆಗೆ ನಮ್ಮ ಹೋರಾಟ ನಿಲ್ಲದು : ಲಾಲಾಜಿ ಆರ್. ಮೆಂಡನ್

ಕಾಪು,  : ಕಾಂಗ್ರೆಸ್ ಮತ್ತು ಜೆಡಿಎಸ್ ಅಕಾರದ ಲಾಲಸೆ ನಡೆಸಿ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದು, ಇದರಿಂದಾಗಿ ರಾಜ್ಯದಲ್ಲಿ ಅಕ್ರಮ ಸರಕಾರ ಆಡಳಿತಕ್ಕೆ ಬರುವಂತಾಗಿದೆ. ಈ ಅಪವಿತ್ರ ಮೈತ್ರಿ ತೀವ್ರ ಖಂಡನೀಯವಾಗಿದೆ. ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರಕಾರ ಬಿದ್ದು, ಬಿಜೆಪಿ ಆಡಳಿತಕ್ಕೆ ಬರುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸರಕಾರ ಮತ್ತು ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕರಿಸುತ್ತಿರುವುದನ್ನು ಖಂಡಿಸಿ ಕಾಪು ಕ್ಷೇತ್ರ ಬಿಜೆಪಿ ವತಿಯಿಂದ ಕಾಪು ಪೇಟೆಯಲ್ಲಿ ಬುಧವಾರ ನಡೆದ ಕರಾಳ ದಿನಾಚರಣೆ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾಪು ಕ್ಷೇತ್ರದಲ್ಲಿ ಬಿಜೆಪಿಗೆ 76 ಸಾವಿರ ಮಂದಿ ಮತದಾರರು ಮತ ನೀಡಿದ್ದಾರೆ. ಕಾಪು ಕ್ಷೇತ್ರವೂ ಸೇರಿದಂತೆ ಕರಾವಳಿ ಜಿಲ್ಲೆ ಮತ್ತು ರಾಜ್ಯದಲ್ಲೂ ಬಿಜೆಪಿಗೆ ಜನಾದೇಶ ನೀಡಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಜನಾದೇಶಕ್ಕೆ ವಿರುದ್ಧವಾಗಿ ಸರಕಾರ ನಡೆಸಲು ಮುಂದಾಗಿದೆ. ಈ ದುರಾಡಳಿತಕ್ಕೆ ಜನರೇ ಉತ್ತರ ನೀಡಲಿದ್ದು, ಲೋಕಸಭಾ ಚುನಾವಣೆಯಲ್ಲಿ ಸೂಕ್ತ ಪ್ರತ್ಯುತ್ತರ ನೀಡಲಿದ್ದೇವೆ ಎಂದರು.

ಕಾಂಗ್ರೆಸ್‍ನ ಇತಿಹಾಸಕ್ಕೆ ಮೊಳೆ : ಗುರ್ಮೆ ಸುರೇಶ್ ಶೆಟ್ಟಿ

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ನಡುವಿನ ಮೈತ್ರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ಅಪಮಾನವಾಗಿದೆ. ಕೇವಲ ಬಿಜೆಪಿಯನ್ನು ಅಕಾರದಿಂದ ದೂರವಿರಿಸಬೇಕೆಂಬ ಏಕೈಕ ಉದ್ದೇಶವನ್ನು ಇಟ್ಟುಕೊಂಡು ರಾಜ್ಯದ 125ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಠೇವಣಿಯನ್ನೇ ಕಳೆದುಕೊಂಡಿರುವ ಜೆಡಿಎಸ್‍ಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡುವ ಮೂಲಕ ಕಾಂಗ್ರೆಸ್ ತಾನಾಗಿಯೇ ತನ್ನ ಇತಿಹಾಸಕ್ಕೆ ಮೊಳೆ ಹೊಡೆದುಕೊಳ್ಳುತ್ತಿದೆ ಎಂದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ತಾ.ಪಂ. ಸದಸ್ಯೆ ರಜನಿ, ಪುರಸಭೆ ವಿಪಕ್ಷ ನಾಯಕ ಅರುಣ್ ಶೆಟ್ಟಿ ಪಾದೂರು, ಜಿಲ್ಲಾ ಕಾರ್ಯದರ್ಶಿ ರಮಾಕಾಂತ ದೇವಾಡಿಗ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಯನಾ ಗಣೇಶ್, ಕ್ಷೇತ್ರ ಕಾರ್ಯದರ್ಶಿ ಜಿತೇಂದ್ರ ಶೆಟ್ಟಿ ಉದ್ಯಾವರ, ಯುವಮೋರ್ಚಾ ಕ್ಷೇತ್ರಾಧ್ಯಕ್ಷ ಪ್ರವೀಣ್ ಕುಮಾರ್, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಶೇಖ್ ನಝೀರ್, ಎಸ್ಸಿ/ಎಸ್ಟಿ ಮೋರ್ಚಾದ ಅಧ್ಯಕ್ಷ ಚಂದ್ರ ಮಲ್ಲಾರು, ಮಹಿಳಾ ಮೋರ್ಚಾ ಅಧ್ಯಕ್ಷ ಕೇಸರಿ ಯುವರಾಜ್, ಮುಖಂಡರಾದ ವೀಣಾ ಶೆಟ್ಟಿ, ಪವಿತ್ರಾ ಶೆಟ್ಟಿ, ಸಂತೋಷ್ ಸುವರ್ಣ, ಸಂದೀಪ್ ಶೆಟ್ಟಿ, ಕಿರಣ್ ಆಳ್ವ, ಅನಿಲ್ ಕುಮಾರ್, ಸರೋಜಿನಿ ಶೆಟ್ಟಿ, ಸತೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

27 minutes ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

39 minutes ago

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ – vishwanews24

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ ಮಂಗಳೂರು: ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನೇ ರಾಜಕೀಯ…

55 minutes ago

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR – vishwanews24

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಿ.ಟಿ.ರವಿ ವಿರುದ್ಧ FIR ಚಿಕ್ಕಮಗಳೂರು: ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ…

58 minutes ago

‘ಬಿಪಿಎಲ್ ಪಡಿತರ ಚೀಟಿ’ ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ : ಸಚಿವ ಕೆ.ಎಚ್.ಮುನಿಯಪ್ಪ – vishwanews24

BPL ಕಾರ್ಡ್‌ ಕುರಿತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ    ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ…

1 hour ago

ಬೆಳ್ತಂಗಡಿ:  ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು – vishwanews24

ಬೆಳ್ತಂಗಡಿ:  ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು ಬೆಳ್ತಂಗಡಿ,: ಭಾರೀ ಮಳೆ ಹಾಗೂ…

1 hour ago