ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿನ ಸೋಲಿಗೆ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಮಂಗಳವಾರ ರಾಜೀನಾಮೆ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದರು. ಅಲ್ಲದೇ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡರಿಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದರು.
ಸಮನ್ವಯ ಸಮಿತಿಯಲ್ಲಿ ನನಗೆ ಅವಕಾಶವೇ ಕೊಡಲಿಲ್ಲ. ಎಲ್ಲವೂ ಸಿದ್ದರಾಮಯ್ಯನವರ ಅಣತಿಯಂತೆ ನಡೆಯುತ್ತಿತ್ತು. ಸಮನ್ವಯ ಸಮಿತಿ ಕೇವಲ ಹೆಸರಿಗೆ ಮಾತ್ರ ಆಗಿತ್ತು. ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಲು ಆಗಲಿಲ್ಲ. ಸಿದ್ದರಾಮಯ್ಯ ಕೈಗೊಂಬೆಯಂತೆ ಕಾರ್ಯನಿರ್ವಹಿಸುವ ಸ್ಥಿತಿ ಬಂದಿತ್ತು ಎಂದು ರಾಜೀನಾಮೆ ಪತ್ರದಲ್ಲಿ ವಿಶ್ವನಾಥ್ ಕಿಡಿಕಾರಿದ್ದಾರೆ.
ಸರ್ಕಾರ ನಡೆಸುವ ಪ್ರಾಮಾಣಿಕ ಪ್ರಯತ್ನ ನಡೆಯಲಿಲ್ಲ. ಎರಡೂ ಪಕ್ಷಗಳ ನಡುವೆ ಸಮನ್ವಯ ಸಾಧಿಸುವಲ್ಲಿ ವಿಫಲ. ಜೆಡಿಎಸ್ ಅಧ್ಯಕ್ಷನಾಗಿದ್ದರೂ ಸಮನ್ವಯ ಸಮಿತಿಯಲ್ಲಿ ನನಗೆ ಸ್ಥಾನ ಕೊಡಲಿಲ್ಲ. ದಿನೇಶ್ ಗುಂಡೂರಾವ್ ಅವರಿಗೂ ಅವಕಾಶ ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…