ಜೆಡಿಎಸ್ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಕಾರ್ಯಕರ್ತರ ವಿರೋಧ -Vishwanews24
ಬೆಂಗಳೂರು: ಜೆಡಿಎಸ್ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತವಾಗಿದೆ. ಮಹಾಲಕ್ಷ್ಮಿ ಲೇಔಟ್ ನ ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಬಿಜೆಪಿ ಸರ್ಕಾರ ರಚಿಸುವುದೇ? ಬೇಡವೇ? ಎಂದು ಮನೆಗೆ ಬಂದಿದ್ದ ಬಿಜೆಪಿ ಕಾರ್ಯಕರ್ತರಿಗೆ ಯಡಿಯೂರಪ್ಪ ಪ್ರಶ್ನಿಸಿದ್ದಾರೆ. ಬಿಜೆಪಿ ಸರ್ಕಾರ ರಚನೆಯಾಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ನಮ್ಮ ರಾಜಕೀಯ ಭವಿಷ್ಯವೇನು ಎಂದು ಯಡಿಯೂರಪ್ಪನವರಿಗೆ ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡಿದ್ದು, ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ಸ್ಥಾನಮಾನದ ಬಗ್ಗೆ ನಂತರ ಚರ್ಚಿಸೋಣ ಎಂದು ಹೇಳಿದ್ದಾರೆ.
ಜೆಡಿಎಸ್ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆ ಸಂಬಂಧ ಮನವಿ ಸಲ್ಲಿಸಲು ಬಂದಿದ್ದ ಮಹಾಲಕ್ಷ್ಮಿಲೇಔಟ್ 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪರನ್ನು ಭೇಟಿ ಮಾಡಿದ್ದಾರೆ.

