Featured

ಜೆಪಿ ಹೆಗ್ಡೆ ಮನವಿಗೆ ಸಿಎಂ ಸ್ಪಂದನೆ : ಕುಂದಾಪ್ರ ಭಾಷೆ ಅಭಿವೃದ್ಧಿಗೆ ಸರ್ಕಾರದಿಂದ 50 ಲಕ್ಷ ರೂ. ಬಿಡುಗಡೆ – vishwanews24

ಜೆಪಿ ಹೆಗ್ಡೆ ಮನವಿಗೆ ಸಿಎಂ ಸ್ಪಂದನೆ : ಕುಂದಾಪ್ರ ಭಾಷೆ ಅಭಿವೃದ್ಧಿಗೆ ಸರ್ಕಾರದಿಂದ 50 ಲಕ್ಷ ರೂ. ಬಿಡುಗಡೆ

ಕುಂದಾಪುರ: ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅಗತ್ಯವಿರುವ ಅನುದಾನ ನೀಡುವಂತೆ ಮಂಗಳೂರು ವಿಶ್ವವಿದ್ಯಾಲಯ ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ವಿಚಾರ ಸರ್ಕಾರ ಮಟ್ಟದಲ್ಲಿ ಬಾಕಿ ಉಳಿದಿತ್ತು.

ಕಳೆದ ಫೆಬ್ರವರಿ ತಿಂಗಳಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ, ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಅವರು, ಈ ವಿಚಾರದ ಕುರಿತು ಸರ್ಕಾರಕ್ಕೆ ಪತ್ರ ಬರೆದು, ಉಡುಪಿ ಜಿಲ್ಲಾ ವ್ಯಾಪ್ತಿಯ ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲ್ಲೂಕುಗಳಲ್ಲಿ ಪೂರ್ಣವಾಗಿ, ಹೆಬ್ರಿ, ಕಾಪು ಉಡುಪಿಯೂ ಸೇರಿದಂತೆ ಕೆಲವು ಭಾಗಗಳಲ್ಲಿ ಮಾತೃ ಭಾಷೆಯಾಗಿ ಬಳಸುತ್ತಿರುವ ಕುಂದಾಪ್ರ ಭಾಷೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಕುಂದಗನ್ನಡ ಭಾಷೆಯ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ ಕೊಡಲೇ ಒಂದೂವರೆ ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಡಿದ್ದ ಮನವಿಗೆ, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮೊದಲ ಹಂತದ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದೆ ಹಂತ ಹಂತವಾಗಿ ಹಣ ಬಿಡುಗಡೆಯಾಗುವ ಭರವಸೆ ಇದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago