ಕುಂದಾಪುರ: ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅಗತ್ಯವಿರುವ ಅನುದಾನ ನೀಡುವಂತೆ ಮಂಗಳೂರು ವಿಶ್ವವಿದ್ಯಾಲಯ ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ವಿಚಾರ ಸರ್ಕಾರ ಮಟ್ಟದಲ್ಲಿ ಬಾಕಿ ಉಳಿದಿತ್ತು.
ಕಳೆದ ಫೆಬ್ರವರಿ ತಿಂಗಳಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ, ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಅವರು, ಈ ವಿಚಾರದ ಕುರಿತು ಸರ್ಕಾರಕ್ಕೆ ಪತ್ರ ಬರೆದು, ಉಡುಪಿ ಜಿಲ್ಲಾ ವ್ಯಾಪ್ತಿಯ ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲ್ಲೂಕುಗಳಲ್ಲಿ ಪೂರ್ಣವಾಗಿ, ಹೆಬ್ರಿ, ಕಾಪು ಉಡುಪಿಯೂ ಸೇರಿದಂತೆ ಕೆಲವು ಭಾಗಗಳಲ್ಲಿ ಮಾತೃ ಭಾಷೆಯಾಗಿ ಬಳಸುತ್ತಿರುವ ಕುಂದಾಪ್ರ ಭಾಷೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಕುಂದಗನ್ನಡ ಭಾಷೆಯ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ ಕೊಡಲೇ ಒಂದೂವರೆ ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಡಿದ್ದ ಮನವಿಗೆ, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದರು.
ಈ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮೊದಲ ಹಂತದ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದೆ ಹಂತ ಹಂತವಾಗಿ ಹಣ ಬಿಡುಗಡೆಯಾಗುವ ಭರವಸೆ ಇದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…