Featured

ಜೆರೋಸಾ ಶಾಲೆಯ ಪ್ರಕರಣ : ಬಿಜೆಪಿ ಶಾಸಕರು ಕ್ರೈಸ್ತ ಶಿಕ್ಷಣ ಸಂಸ್ಥೆಗಳನ್ನು ತ್ಯಜಿಸಲು ಕರೆ ನೀಡಿರುವುದು ನಿಜಕ್ಕೂ ಖೇದಕರ : ವೆರೋನಿಕಾ ಕರ್ನೆಲಿಯೋ – Vishwanews24

ಜೆರೋಸಾ ಶಾಲೆಯ ಪ್ರಕರಣ : ಬಿಜೆಪಿ ಶಾಸಕರು ಕ್ರೈಸ್ತ ಶಿಕ್ಷಣ ಸಂಸ್ಥೆಗಳನ್ನು ತ್ಯಜಿಸಲು ಕರೆ ನೀಡಿರುವುದು ನಿಜಕ್ಕೂ ಖೇದಕರ : ವೆರೋನಿಕಾ ಕರ್ನೆಲಿಯೋ

ಮಂಗಳೂರು: ಸಂತ ಜೆರೋಸಾ ಶಾಲೆಯ ಪ್ರಕರಣದಲ್ಲಿ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿಯವರು ನಡೆದುಕೊಂಡ ರೀತಿ ನಾಚಿಕೇಗೇಡಿನದ್ದು ಎಂದು ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಶಾಲೆಯಲ್ಲಿ ಏನೋ ಒಂದು ವಿಚಾರ ನಡೆದಿದ್ದು ಅದನ್ನೆ ನೆಪವಾಗಿಟ್ಟುಕೊಂಡು ಶಾಸಕ ವೇದವ್ಯಾಸ್ ಕಾಮತ್ ಅವರು ಶಾಲೆಯ ಗೇಟಿನ ಹೊರಗಡೆ ಮುಗ್ದ ಮಕ್ಕಳನ್ನು ಬಳಸಿಕೊಂಡು ಪ್ರತಿಭಟನೆ ಮಾಡಿದ್ದು ಅಲ್ಲದೆ ಘೋಷಣೆಗಳನ್ನು ಕೂಗಲು ಪ್ರೇರಿಪಿಸಿರುವುದು ಖಂಡನೀಯ. ಅವರು ಒರ್ವ ಶಾಸಕರು ಎಂಬುದನ್ನು ಮರೆತು ನಡೆದುಕೊಂಡ ವರ್ತನೆ ನಾಗರೀಕ ಸಮಾಜ ತಲೆತಗ್ಗಿಸುವಂತದ್ದಾಗಿದೆ. ಒರ್ವ ಶಾಸಕರಾಗಿ ಆಯ್ಕೆಯಾದವರಿಗೆ ವಿವಿಧ ಜವಾಬ್ದಾರಿಗಳನ್ನು ಹೊಂದಿರುತ್ತಾರೆ. ಶಾಸನ ರಚನೆಯಲ್ಲಿ ವಿಶೇಷ ಜವಾಬ್ದಾರಿ ಹೊಂದಿರುವ ಒರ್ವ ಶಾಸಕ ಕೇವಲ ಒಂದು ಪಕ್ಷ, ಜಾತಿಗೆ ಸೀಮಿತರಲ್ಲ ಎನ್ನುವುದನ್ನು ಅವರು ಮರೆತು ವರ್ತಿಸಿದ್ದಾರೆ.

ಯಾವುದೇ ಘಟನೆ ನಡೆದಾಗ ಅವರಿಗೆ ಇರುವ ಅಧಿಕಾರವನ್ನು ಬಳಸಿಕೊಂಡು ನೇರವಾಗಿ ಶಾಲೆಗೆ ತೆರಳಿ ಅಲ್ಲಿಯ ಘಟನೆಯ ಕುರಿತು ಮಾಹಿತಿ ಪಡೆದು ಸಮಸ್ಯೆಯನ್ನು ಪರಿಹಾರ ಮಾಡುವುದಾಗಿದೆ. ಇಲ್ಲವಾದರೆ ಅದನ್ನು ಸೂಕ್ತ ತನಿಖೆಗೆ ಸೂಚನೆ ಕೊಟ್ಟು, ಅದರಲ್ಲಿ ಯಾವ ಫಲಿತಾಂಶ ಬರುವುದೋ ಅದರ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದನ್ನು ಬಿಟ್ಟು, ಸಂಸ್ಥೆಯ ಗೇಟಿನ ಒಳಗಡೆ ಬರದೆ ಶಾಲೆಯ ಮುಖ್ಯಸ್ಥರು ಮನವಿ ಮಾಡಿಕೊಂಡರೂ ಕೂಡ ಯಾವುದೇ ಸ್ಪಂದನೆ ನೀಡದೆ ಮಕ್ಕಳನ್ನು ಪ್ರೇರೆಪಿಸಿ ಪ್ರತಿಭಟಿಸಿದ್ದು ಅವರ ಘನತೆಗೆ ತಕ್ಕುದಾದಲ್ಲ.

ಕಳೆದ ಹಲವಾರು ವರ್ಷಗಳಿಂದ ಕ್ರೈಸ್ತ ಸಂಸ್ಥೆಗಳು ಮತ್ತು ಕ್ರೈಸ್ತ ಧರ್ಮ ಭಗಿನಿಯರು ನೀಡಿದ ಸೇವೆ ಪ್ರತಿಯೊಂದು ಸಮುದಾಯ ಕೂಡ ಹೊಗಳುತ್ತದೆ. ಯಾವುದೇ ಜಾತಿ ಭೇದವಿಲ್ಲದೆ ಪ್ರತಿಯೊಂದು ಮಗವಿಗೆ ಮೌಲ್ಯಯುತ ಶಿಕ್ಷಣ ನೀಡಿಕೊಂಡು ಬಂದಿರುವುದು ಪ್ರತಿಯೊಬ್ಬರಿಗೂ ತಿಳಿದ ವಿಚಾರವಾಗಿದೆ. ಓರ್ವ ಶಾಸಕ ಭರತ್ ಶೆಟ್ಟಿಯವರು ಕ್ರೈಸ್ತ ಶಿಕ್ಷಣ ಸಂಸ್ಥೆಗಳನ್ನು ತ್ಯಜಿಸಲು ಕರೆ ನೀಡಿರುವುದು ನಿಜಕ್ಕೂ ಖೇದಕರ. ಇಂತಹ ಹೇಳಿಕೆ ನೀಡಿರುವ ಅವರು ಶಾಸಕ ಸ್ಥಾನದಲ್ಲಿ ಮುಂದುವರಿಯಲು ಅರ್ಹರಲ್ಲ. ಇಂತಹ ಘಟನೆಗಳನ್ನು ನೋಡಿದಾಗ ನಮ್ಮ ಸಮಾಜ ಎತ್ತ ಕಡೆ ಸಾಗುತ್ತಿದೆ ಎನ್ನುವ ಸಂಶಯ ಕಾಡುತ್ತಿದೆ.

ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರಗಳಲ್ಲಿ ಧರ್ಮವನ್ನು ಬೆರೆಸುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಇದಕ್ಕೆ ನೇರ ಕಾರಣ ರಾಜಕೀಯ ಎನ್ನುವುದು ಸ್ಪಷ್ಠವಾಗಿ ಗೋಚರಿಸುತ್ತದೆ. ಇದೇ ರೀತಿ ಮುಂದುವರೆದಲ್ಲಿ ನಮ್ಮ ಮಕ್ಕಳು ದೇಶದ ಉತ್ತಮ ನಾಗರಿಕರಾಗಿ ಮುಂದುವರೆಯಲು ಸಾಧ್ಯವೇ ಎನ್ನುವ ಪ್ರಶ್ನೆ ಮೂಡುತ್ತದೆ. ಇಂತಹ ಘಟನೆಗಳಾದಾಗ ನಮಗೆ ಕೂಡ ಪ್ರತಿಭಟನೆ ಮಾಡಲು ಸಾಧ್ಯವಿದೆ ಆದರೆ ಕ್ರೈಸ್ತ ಸಮುದಾಯ ಶಾಂತಿಯನ್ನು ಬಯಸುವವರಾಗಿದ್ದು ನ್ಯಾಯ ಮತ್ತು ಸಂವಿಧಾನಕ್ಕೆ ತಲೆಬಾಗುವವರು. ಈ ಘಟನೆಗೆ ಸಂಬಂಧಿಸಿ ತನಿಖಾಧಿಕಾರಿಯನ್ನು ನೇಮಿಸಿದ್ದು ಸೂಕ್ತ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಿದ್ದರೂ ಕೂಡ ಅಂತಹವರಿಗೆ ಸೂಕ್ತ ಕ್ರಮ ನಡೆಯಲಿ ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago