ದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಜೆ.ಎನ್.ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷೆ ಐಶೆ ಘೋಶ್ ಸೇರಿದಂತೆ 19 ವಿದ್ಯಾರ್ಥಿಗಳ ಮೇಲೆ ದಿಲ್ಲಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ.
ಜೆಎನ್ಯು ಹಿಂಸಾಚಾರ ನಡೆದ ಹಿಂದಿನ ದಿನ, ಅಂದರೆ ಜನವರಿ 4ರಂದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಸರ್ವರ್ ಕೊಠಡಿಯಲ್ಲಿ ದಾಂಧಲೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಐಶೆ ಘೋಶ್ ಮತ್ತು ಇತರ ವಿದ್ಯಾರ್ಥಿಗಳ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.
ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಸರ್ವರ್ ಕೊಠಡಿಗಳಲ್ಲಿ ದಾಂಧಲೆ ನಡೆಸಿದ್ದಾರೆ ಎಂದು ಜೆ.ಎನ್.ಯು ಆಡಳಿತ ಮಂಡಳಿ ಐಶೆ ಘೋಶ್ ಮತ್ತು ಇತರ ವಿದ್ಯಾರ್ಥಿಗಳ ವಿರುದ್ಧ ದೂರು ನೀಡಿತ್ತು. ಜನವರಿ 5ರಂದು ಎಫ್.ಐ.ಆರ್ ದಾಖಲಿಸಲಾಗಿದೆ. ಜೆಎನ್ಯು ಹಿಂಸಾಚಾರಕ್ಕೆ ಸಂಬಂಧಿಸಿ ಮೂರು ಎಫ್.ಐ.ಆರ್.ಗಳು ದಾಖಲಾಗಿವೆ.
ಜೆ.ಎನ್.ಯು ಕಾಲೇಜು ಆವರಣದೊಳಗೆ ನುಗ್ಗಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಮುಸುಕುಧಾರಿ ಗೂಂಡಾಗಳ ಪೈಕಿ ಒಬ್ಬರನ್ನೂ ಇದುವರೆಗೆ ಬಂಧಿಸಿಲ್ಲ. ಕಬ್ಬಿಣದ ರಾಡ್ ಮತ್ತು ದೊಣ್ಣೆಗಳೊಂದಿಗೆ ಕ್ಯಾಂಪಸ್ ಗೆ ನುಗ್ಗಿದ್ದ ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಥಳಿಸಿದ್ದರು. ಗೂಂಡಾಗಳ ಕೃತ್ಯ ವಿಡಿಯೋದಲ್ಲಿ ದಾಖಲಾಗಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿವೆ. ದುರ್ಘಟನೆಯಲ್ಲಿ ವಿದ್ಯಾರ್ಥಿ ನಾಯಕಿ ಐಶೆ ಘೋಶ್ ತಲೆಯಿಂದ ರಕ್ತ ಸೋರುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಘಟನೆಯಲ್ಲಿ ಸುಮಾರು 30 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು.
ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ನಡುವೆ ಹಾಸ್ಟೆಲ್ ಶುಲ್ಕ ದರ ವಿಚಾರವಾಗಿ ಪ್ರಸ್ತುತ ನಡೆಯುತ್ತಿರುವ ತಿಕ್ಕಾಟಕ್ಕೂ ಮತ್ತು ಸರ್ವರ್ ಘಟನೆಗೂ ಸಂಬಂಧವಿದೆ. ಅಲ್ಲದೆ, ಭಾನುವಾರ ನಡೆದ ಹಿಂಸಾತ್ಮಕ ಘಟನೆಗೂ ಸರ್ವರ್ ಘಟನೆಗೂ ಸಂಬಂಧವಿದೆ ಎಂದು ವಿಶ್ವವಿದ್ಯಾಲಯ ವಾದಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…