ಜೈನಮುನಿ ಹತ್ಯೆಯ ಹಿಂದೆ ಮುಸ್ಲಿಂ ಸಂಘಟನೆಗಳ ಕೈವಾಡ ಶಂಕೆ : ಸಿಬಿಐ ತನಿಖೆಗೆ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಆಗ್ರಹ – Vishwanews24
ಜೈನಮುನಿ ಹತ್ಯೆಯ ಹಿಂದೆ ಮುಸ್ಲಿಂ ಸಂಘಟನೆಗಳ ಕೈವಾಡ ಶಂಕೆ : ಸಿಬಿಐ ತನಿಖೆಗೆ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಆಗ್ರಹ
ಬೆಳಗಾವಿ : ‘ತಾಲ್ಲೂಕಿನ ಹಿರೇಕೋಡಿಯ ನಂದಿಪರ್ವತ ಆಶ್ರಮದ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಕೊಲೆಯಲ್ಲಿ ಒಬ್ಬನ ಕೈವಾಡ ಮಾತ್ರವಿಲ್ಲ. ಇದರ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಶಂಕೆ ಇದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಅಖಿಲ ಭಾರತೀಯ ಸಂತ ಸಮಿತಿ ರಾಜ್ಯ ಘಟಕದ ಅಧ್ಯಕ್ಷರಾದ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಆಗ್ರಹಿಸಿದರು.
ಹಿರೇಕೋಡಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಆಶ್ರಮದ ನಿವಾಸಿಗಳಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ‘ಹಿಂದೆ ಮಹಾರಾಷ್ಟ್ರದಲ್ಲೂ ಒಬ್ಬ ಸನ್ಯಾಸಿಯನ್ನು ಹೊಡೆದು ಕೊಲ್ಲಲಾಗಿದೆ. ಅಲ್ಲಿ ಅಂದು ಇದ್ದದ್ದು ‘ಇದೇ ಪಕ್ಷದ’ ಸರ್ಕಾರ. ಇಂದು ಇಲ್ಲಿಯೂ ಅವರದೇ ಪಕ್ಷದ ಸರ್ಕಾರವಿದೆ. ಇವರ ಸರ್ಕಾರ ಇದ್ದಾಗ ಮಾತ್ರ ಏಕೆ ಇಂಥ ದುರ್ಘಟನೆಗಳು ನಡೆಯುತ್ತವೆ?’ ಎಂದು ಅವರು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಉಡುಪಿ : ಯದ್ವಾತದ್ವಾ ಬಸ್ ಓಡಿಸುವ ಬರದಲ್ಲಿ ಸರ್ಕಾರಿ ಬಸ್ಗೆ ಢಿಕ್ಕಿ ಹೊಡೆದ ಖಾಸಗಿ ಬಸ್ – Vishwanews24
‘ಜೈನ ಮುನಿ ಹತ್ಯೆ ಬಳಿಕ ನಿರಂತರವಾಗಿ ಏಳು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ‘ಈ ಪಕ್ಷ’ ಅಧಿಕಾರಕ್ಕೆ ಬಂದ ಮೇಲೆಯೇ ಅಪರಾಧಿಗಳ ಕೃತ್ಯ ಹೆಚ್ಚಾಗಿವೆ. ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಭರದಲ್ಲಿ ಬಹುಸಂಖ್ಯಾತರ ಅಸ್ತಿತ್ವಕ್ಕೆ ಅಪಮಾನ ಮಾಡಬಾರದು’ ಎಂದೂ ಕಿಡಿ ಕಾರಿದರು.
