ಬೆಳಗಾವಿ : ‘ತಾಲ್ಲೂಕಿನ ಹಿರೇಕೋಡಿಯ ನಂದಿಪರ್ವತ ಆಶ್ರಮದ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಕೊಲೆಯಲ್ಲಿ ಒಬ್ಬನ ಕೈವಾಡ ಮಾತ್ರವಿಲ್ಲ. ಇದರ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಶಂಕೆ ಇದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಅಖಿಲ ಭಾರತೀಯ ಸಂತ ಸಮಿತಿ ರಾಜ್ಯ ಘಟಕದ ಅಧ್ಯಕ್ಷರಾದ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಆಗ್ರಹಿಸಿದರು.
ಹಿರೇಕೋಡಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಆಶ್ರಮದ ನಿವಾಸಿಗಳಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ‘ಹಿಂದೆ ಮಹಾರಾಷ್ಟ್ರದಲ್ಲೂ ಒಬ್ಬ ಸನ್ಯಾಸಿಯನ್ನು ಹೊಡೆದು ಕೊಲ್ಲಲಾಗಿದೆ. ಅಲ್ಲಿ ಅಂದು ಇದ್ದದ್ದು ‘ಇದೇ ಪಕ್ಷದ’ ಸರ್ಕಾರ. ಇಂದು ಇಲ್ಲಿಯೂ ಅವರದೇ ಪಕ್ಷದ ಸರ್ಕಾರವಿದೆ. ಇವರ ಸರ್ಕಾರ ಇದ್ದಾಗ ಮಾತ್ರ ಏಕೆ ಇಂಥ ದುರ್ಘಟನೆಗಳು ನಡೆಯುತ್ತವೆ?’ ಎಂದು ಅವರು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
‘ಜೈನ ಮುನಿ ಹತ್ಯೆ ಬಳಿಕ ನಿರಂತರವಾಗಿ ಏಳು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ‘ಈ ಪಕ್ಷ’ ಅಧಿಕಾರಕ್ಕೆ ಬಂದ ಮೇಲೆಯೇ ಅಪರಾಧಿಗಳ ಕೃತ್ಯ ಹೆಚ್ಚಾಗಿವೆ. ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಭರದಲ್ಲಿ ಬಹುಸಂಖ್ಯಾತರ ಅಸ್ತಿತ್ವಕ್ಕೆ ಅಪಮಾನ ಮಾಡಬಾರದು’ ಎಂದೂ ಕಿಡಿ ಕಾರಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…