ರಾಖಿ ಸಾವಂತ್ ಅವರು ಈಗ ದುಬೈನಲ್ಲಿ ನಟನೆ, ಡ್ಯಾನ್ಸ್ ಹೇಳಿಕೊಡುವ ‘ರಾಖಿ ಸಾವಂತ್ ಅಕಾಡೆಮಿ’ಯನ್ನು ಆರಂಭಿಸಿದ್ದಾರೆ. ಈ ಮೂಲಕ ಸರಿಗಮಪ, ಇಂಡಿಯನ್ ಐಡಲ್ ಶೋಗಳಿಗೆ ಉತ್ತಮ ಸ್ಪರ್ಧಿಯನ್ನು ಕಳಿಸ್ತಾರಂತೆ. ಈ ವಿಚಾರವಾಗಿ ಮಾಧ್ಯಮದ ಜೊತೆ ಮಾತನಾಡುತ್ತ ರಾಖಿ ಸಾವಂತ್ ಅವರು ಆದಿಲ್ ಬಗ್ಗೆಯೂ ಮಾತನಾಡಿದ್ದಾರೆ.
“ನಾನು ತುಂಬ ಸ್ಟ್ರಾಂಗ್. ನನ್ನನ್ನು ನಾನು ಮುಗಿಸಿಕೊಂಡಿದ್ದೆ, ಆದರೆ ಎಲ್ಲ ಅಭಿಮಾನಿಗಳಿಂದ ಗಟ್ಟಿಯಾಗಿದ್ದೇನೆ. ಮೈಸೂರಿನ ಜೈಲಿನಲ್ಲಿದ್ದುಕೊಂಡು ಆದಿಲ್ ನನಗೆ ಮೆಸೇಜ್ ಮಾಡಿ ಒಂದು ಅವಕಾಶ ಕೊಡು ಅಂತ ಕೇಳುತ್ತಿದ್ದಾನೆ. ನಾನು ಅವನಿಗೆ ಕಾಲಿಗೆ ಬಿದ್ದು ಮನೆಗೆ ಬಾ, ಬೇರೆದೆಲ್ಲ ಬಿಡು ಅಂತ ಹೇಳಿದ್ದರೂ ಕೇಳಿಲ್ಲ. ಆದಿಲ್ ಖುರಾನ್ನ ಮೇಲೆ ಆಣೆ ಮಾಡಿ ಸರಿಯಾಗಿ ಇರ್ತೀನಿ ಅಂತ ಹೇಳಬೇಕು , ಕೋರ್ಟ್ನಲ್ಲಿ ನಾನು ರಾಖಿಯನ್ನು ಚೆನ್ನಾಗಿ ನೋಡಿಕೊಳ್ತೀನಿ, ಮದುವೆಯನ್ನು ನಿಭಾಯಿಸಿಕೊಂಡು ಹೋಗುವೆ ಅಂತ ಬರೆದುಕೊಡಬೇಕು, ಆದರೆ ಅವನು ನನ್ನ ತಾಯಿಯನ್ನು ವಾಪಾಸ್ ತರುತ್ತಾನಾ? ಸಾಧ್ಯವೇ ಇಲ್ಲ. ಹಾಗಾಗಿ ನಾನು ಆದಿಲ್ನನ್ನು ಕ್ಷಮಿಸೋದಿಲ್ಲ” ಎಂದು ರಾಖಿ ಸಾವಂತ್ ಹೇಳಿದ್ದಾರೆ.
“ಆದಿಲ್ ಮತ್ತೆ ನನ್ನ ಜೀವನದಲ್ಲಿ ಬರೋಕೆ ಇಷ್ಟಪಡ್ತಿದ್ದಾನೆ. ಅವನು ವಾಪಾಸ್ ಬರೋದು ನನ್ನನ್ನು ಕೊಲ್ಲೋದಿಕ್ಕಾ? ನನ್ನ ಜೀವನ ಹಾಳು ಮಾಡಿದ ಹಾಗೆ ಅವನು ಇನ್ನೊಂದು ಹುಡುಗಿ ಜೀವನ ಹಾಳು ಮಾಡಬಾರದು ಅಂತ ನಾನು ಆದಿಲ್ಗೆ ವಿಚ್ಛೇದನ ಕೊಡೋದಿಲ್ಲ. ಜೀವನದಲ್ಲಿ ನಾನು ಇನ್ಮುಂದೆ ಮದುವೆ ಆಗೋದಿಲ್ಲ, ಮಕ್ಕಳ ಬಗ್ಗೆಯೂ ಯೋಚನೆ ಮಾಡೋದಿಲ್ಲ. ನನ್ನ ಅಕಾಡೆಮಿಯ ಮಕ್ಕಳು ನನ್ನ ಮಕ್ಕಳು” ಎಂದು ರಾಖಿ ಸಾವಂತ್ ಹೇಳಿದ್ದಾರೆ.
“ಬಾಲಿವುಡ್ ನನ್ನ ಕರ್ಮಭೂಮಿ, ಮುಂಬೈ ನನ್ನ ಜನ್ಮಭೂಮಿ. ಅಂತೆಯೇ ದುಬೈನಲ್ಲಿಯೂ ನಾನು ಏನಾದರೊಂದು ಮಾಡಬೇಕು. ಬಾಲಿವುಡ್, ಹಾಲಿವುಡ್ ರೀತಿ ದುಬೈನಲ್ಲಿ ದಾಲಿವುಡ್ ಮಾಡಬೇಕು. ಭಾರತದಲ್ಲಿರುವ ಪತ್ರಕರ್ತರು, ಪಾಪರಾಜಿಗಳ ರೀತಿ ದುಬೈನಲ್ಲಿ ಕೂಡ ಪತ್ರಕರ್ತರು, ಪಾಪರಾಜಿ ಇರಬೇಕು, ಅದಕ್ಕೆ ಏನು ಬೇಕೋ ಅದನ್ನು ನಾನು ನೀಡುತ್ತೇನೆ” ಎಂದು ರಾಖಿ ಸಾವಂತ್ ಹೇಳಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…