Featured

ಜೈಲಿನಲ್ಲಿದ್ದುಕೊಂಡು ಆದಿಲ್ ನನಗೆ ಮೆಸೇಜ್ ಮಾಡಿ ಒಂದು ಅವಕಾಶ ಕೊಡು ಅಂತ ಕೇಳುತ್ತಿದ್ದಾನೆ : ರಾಖಿ ಸಾವಂತ್ – Vishwanews24

ಜೈಲಿನಲ್ಲಿದ್ದುಕೊಂಡು ಆದಿಲ್ ನನಗೆ ಮೆಸೇಜ್ ಮಾಡಿ ಒಂದು ಅವಕಾಶ ಕೊಡು ಅಂತ ಕೇಳುತ್ತಿದ್ದಾನೆ, ನಾನು ಅವನನ್ನು ಕ್ಷಮಿಸೋದಿಲ್ಲ : ರಾಖಿ ಸಾವಂತ್

ರಾಖಿ ಸಾವಂತ್ ಅವರು  ಈಗ ದುಬೈನಲ್ಲಿ ನಟನೆ, ಡ್ಯಾನ್ಸ್ ಹೇಳಿಕೊಡುವ ‘ರಾಖಿ ಸಾವಂತ್ ಅಕಾಡೆಮಿ’ಯನ್ನು ಆರಂಭಿಸಿದ್ದಾರೆ. ಈ ಮೂಲಕ ಸರಿಗಮಪ, ಇಂಡಿಯನ್ ಐಡಲ್ ಶೋಗಳಿಗೆ ಉತ್ತಮ ಸ್ಪರ್ಧಿಯನ್ನು ಕಳಿಸ್ತಾರಂತೆ. ಈ ವಿಚಾರವಾಗಿ ಮಾಧ್ಯಮದ ಜೊತೆ ಮಾತನಾಡುತ್ತ ರಾಖಿ ಸಾವಂತ್ ಅವರು ಆದಿಲ್ ಬಗ್ಗೆಯೂ ಮಾತನಾಡಿದ್ದಾರೆ.

“ನಾನು ತುಂಬ ಸ್ಟ್ರಾಂಗ್. ನನ್ನನ್ನು ನಾನು ಮುಗಿಸಿಕೊಂಡಿದ್ದೆ, ಆದರೆ ಎಲ್ಲ ಅಭಿಮಾನಿಗಳಿಂದ ಗಟ್ಟಿಯಾಗಿದ್ದೇನೆ. ಮೈಸೂರಿನ ಜೈಲಿನಲ್ಲಿದ್ದುಕೊಂಡು ಆದಿಲ್ ನನಗೆ ಮೆಸೇಜ್ ಮಾಡಿ ಒಂದು ಅವಕಾಶ ಕೊಡು ಅಂತ ಕೇಳುತ್ತಿದ್ದಾನೆ. ನಾನು ಅವನಿಗೆ ಕಾಲಿಗೆ ಬಿದ್ದು ಮನೆಗೆ ಬಾ, ಬೇರೆದೆಲ್ಲ ಬಿಡು ಅಂತ ಹೇಳಿದ್ದರೂ ಕೇಳಿಲ್ಲ. ಆದಿಲ್ ಖುರಾನ್‌ನ ಮೇಲೆ ಆಣೆ ಮಾಡಿ ಸರಿಯಾಗಿ ಇರ್ತೀನಿ ಅಂತ ಹೇಳಬೇಕು , ಕೋರ್ಟ್‌ನಲ್ಲಿ ನಾನು ರಾಖಿಯನ್ನು ಚೆನ್ನಾಗಿ ನೋಡಿಕೊಳ್ತೀನಿ, ಮದುವೆಯನ್ನು ನಿಭಾಯಿಸಿಕೊಂಡು ಹೋಗುವೆ ಅಂತ ಬರೆದುಕೊಡಬೇಕು, ಆದರೆ ಅವನು ನನ್ನ ತಾಯಿಯನ್ನು ವಾಪಾಸ್ ತರುತ್ತಾನಾ? ಸಾಧ್ಯವೇ ಇಲ್ಲ. ಹಾಗಾಗಿ ನಾನು ಆದಿಲ್‌ನನ್ನು ಕ್ಷಮಿಸೋದಿಲ್ಲ” ಎಂದು ರಾಖಿ ಸಾವಂತ್ ಹೇಳಿದ್ದಾರೆ.

“ಆದಿಲ್ ಮತ್ತೆ ನನ್ನ ಜೀವನದಲ್ಲಿ ಬರೋಕೆ ಇಷ್ಟಪಡ್ತಿದ್ದಾನೆ. ಅವನು ವಾಪಾಸ್ ಬರೋದು ನನ್ನನ್ನು ಕೊಲ್ಲೋದಿಕ್ಕಾ? ನನ್ನ ಜೀವನ ಹಾಳು ಮಾಡಿದ ಹಾಗೆ ಅವನು ಇನ್ನೊಂದು ಹುಡುಗಿ ಜೀವನ ಹಾಳು ಮಾಡಬಾರದು ಅಂತ ನಾನು ಆದಿಲ್‌ಗೆ ವಿಚ್ಛೇದನ ಕೊಡೋದಿಲ್ಲ. ಜೀವನದಲ್ಲಿ ನಾನು ಇನ್ಮುಂದೆ ಮದುವೆ ಆಗೋದಿಲ್ಲ, ಮಕ್ಕಳ ಬಗ್ಗೆಯೂ ಯೋಚನೆ ಮಾಡೋದಿಲ್ಲ. ನನ್ನ ಅಕಾಡೆಮಿಯ ಮಕ್ಕಳು ನನ್ನ ಮಕ್ಕಳು” ಎಂದು ರಾಖಿ ಸಾವಂತ್ ಹೇಳಿದ್ದಾರೆ.

“ಬಾಲಿವುಡ್ ನನ್ನ ಕರ್ಮಭೂಮಿ, ಮುಂಬೈ ನನ್ನ ಜನ್ಮಭೂಮಿ. ಅಂತೆಯೇ ದುಬೈನಲ್ಲಿಯೂ ನಾನು ಏನಾದರೊಂದು ಮಾಡಬೇಕು. ಬಾಲಿವುಡ್, ಹಾಲಿವುಡ್ ರೀತಿ ದುಬೈನಲ್ಲಿ ದಾಲಿವುಡ್‌ ಮಾಡಬೇಕು. ಭಾರತದಲ್ಲಿರುವ ಪತ್ರಕರ್ತರು, ಪಾಪರಾಜಿಗಳ ರೀತಿ ದುಬೈನಲ್ಲಿ ಕೂಡ ಪತ್ರಕರ್ತರು, ಪಾಪರಾಜಿ ಇರಬೇಕು, ಅದಕ್ಕೆ ಏನು ಬೇಕೋ ಅದನ್ನು ನಾನು ನೀಡುತ್ತೇನೆ” ಎಂದು ರಾಖಿ ಸಾವಂತ್ ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago