ಬೆಂಗಳೂರು: ಜೈಲಿನಲ್ಲಿರುವ ಖೈದಿಗಳಿಗೆ ದಿನಗೂಲಿ ಏರಿಕೆ ಮಾಡಲಾಗಿದೆ ಎಂಬ ವಿಷಯ ಸತ್ಯಕ್ಕೆ ದೂರವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ರಾಜ್ಯದಲ್ಲಿ ಖೈದಿಗಳ ದಿನಗೂಲಿಯನ್ನ 525 ರೂಗಳಿಗೆ ಏರಿಸಲಾಗಿದೆ ಎಂಬ ಸುದ್ದಿ ಹರಡಿದ್ದು ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಕರ್ನಾಟಕದಲ್ಲಿ ಸುಮಾರು ಹದಿನೈದು ಸಾವಿರ ಖೈದಿಗಳು ಜೈಲುವಾಸ ಅನುಭವಿಸುತ್ತಿದ್ದು, ಜೈಲುವಾಸದಲ್ಲಿರುವ ಖೈದಿಗಳಿಗೆ ಕೂಲಿ ಹಣವನ್ನು 200 ರೂಗಳಿಂದ ಸ್ವಲ್ಪ ಹೆಚ್ಚಿಗೆ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತೂ ಅಂತಹ ಆದೇಶ ಇದುವರೆಗೂ ಹೊರಡಿಸಿಲ್ಲ ಎಂದರು.
ಜೈಲು ಶಿಕ್ಷೆಯಲ್ಲಿರುವ ಹಲವು ಖೈದಿಗಳಿಂದ ಪ್ರತಿದಿನ ದುಡಿಮೆ ಮಾಡಿಸಲಾಗುತ್ತಿದ್ದು, ಪ್ರತಿಯೊಬ್ಬ ಕೈದಿಯೂ ಕೆಲಸ ಮಾಡಬೇಕಾಗುತ್ತದೆ. ವಿವಿಧ ಕೆಲಸಗಳ ಮೂಲಕ ಕೈದಿಗಳ ಖಿನ್ನತೆಯನ್ನು ಹೋಗಲಾಡಿಸಿ ಅವರ ಮನಃಪರಿವರ್ತನೆ ಮಾಡುವುದು ಇದರ ಉದ್ದೇಶ ಎಂದಿದ್ದಾರೆ.
ಇನ್ನು ಖೈದಿಗಳಿಗೆ ಕೈಮಗ್ಗ, ಕರಕುಶಲ ವಸ್ತುಗಳ ತಯಾರಿಕೆ, ಸೋಪ್, ಮೇಣದಬತ್ತಿ ತಯಾರಿಕೆ ಸೇರಿದಂತೆ ಇಲಾಖೆಗೆ ಸೇರಿದ ಕೃಷಿ ಜಮೀನಿನಲ್ಲಿ ಹಣ್ಣು ತರಕಾರಿಗಳನ್ನು ಬೆಳೆದು ಮಾರಾಟ ಮಾಡಲಾಗುತ್ತಿದ್ದು, ಈ ಮೂಲಕ ಇಲಾಖೆಗೆ ಆದಾಯವೂ ಬರುತ್ತಿದೆ. ಆದರೆ ಶಿಕ್ಷೆಯಲ್ಲಿರುವ ಖೈದಿಗಳಿಗೆ ಈಗಲೂ ಕೊಡುತ್ತಿರುವುದು ದಿನಕ್ಕೆ 200 ರೂಗಳು. ಅದರಲ್ಲಿ ಊಟದ ಖರ್ಚು 100 ರೂಗಳನ್ನು ಸಹ ಕಳೆಯಲಾಗುತ್ತಿದೆ. ಎಂದು ಹೇಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…