ನವದೆಹಲಿ: ಜೈಲಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಮದ್ಯ ಹರಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿಯನ್ನು ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಈ ರೀತಿಯಾಗಿ ಪ್ರತಿಕ್ರಿಯಿಸಿದರು. ಜೈಲಿನಲ್ಲಿದ್ದರೂ ಹೊರಗಿದ್ದರೂ ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವುದಾಗಿ ತಿಳಿಸಿದ್ದಾರೆ.
ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಗುರುವಾರ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಬಳಿಕ ಇಂದು 10 ದಿನಗಳ ಕಸ್ಟಡಿಗೆ ಕೋರಿದೆ.
ಇತ್ತ ಕೇಜ್ರಿವಾಲ್ ಬಂಧನ ಪ್ರತಿಭಟನೆಗೆ ಕಾರಣವಾಯಿತು. ಪ್ರತಿಭಟನೆಯ ವೇಳೆ ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು ಕೇಜ್ರಿವಾಲ್ ಅವರ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೇಜ್ರಿವಾಲ್ ಅವರ ತಾಯಿ ಆರೋಗ್ಯವಾಗಿಲ್ಲ ಮತ್ತು ಇತ್ತೀಚೆಗಷ್ಟೇ ಅವರು ಆಸ್ಪತ್ರೆಯಿಂದ ವಾಪಸ್ಸಾಗಿದ್ದಾರೆ. ಕುಟುಂಬದ ಸದಸ್ಯರಿಗೆ ಯಾರನ್ನೂ ಭೇಟಿಯಾಗಲು ಅವಕಾಶವಿಲ್ಲ ಎಂದು ಕಿಡಿಕಾರಿದ್ದಾರೆ.
ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಪಕ್ಷದ ಕಾರ್ಯಕರ್ತರಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ. ಇದು ಸಂಪೂರ್ಣ ಸರ್ವಾಧಿಕಾರ. ಲೋಕಸಭಾ ಚುನಾವಣೆ ಗೆಲ್ಲಲು ಹೀಗೆ ಮಾಡಲಾಗುತ್ತಿದೆ. ಜನರು ಎಲ್ಲೇ ಇದ್ದರೂ ಪ್ರತಿಭಟನೆ ಮಾಡುತ್ತಾರೆ, ಇದು ನಿಲ್ಲುವುದಿಲ್ಲ. ಕ್ರಾಂತಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶದ ಮಾತುಗಳನ್ನಾಡಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…