ಗುವಾಹಟಿ: ಜೈಲಿನ ಸಿಬ್ಬಂದಿಗೆ ಹಲ್ಲೆ ಮಾಡಿ, ಅವರ ಮೇಲೆ ಮೆಣಸಿನ ಪುಡಿ ಎರಚಿ ಏಳು ಮಂದಿ ಖದೀಮರು ಜೈಲಿನಿಂದ ಪರಾರಿಯಾದ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ.
ಅರುಣಾಚಲ ಪ್ರದೇಶದ ಪೂರ್ವ ಸಿಯಾಂಗ್ ಜಿಲ್ಲೆಯ ಜೈಲಿನಲ್ಲಿ ರವಿವಾರ ಈ ಘಟನೆ ನಡೆದಿದೆ.
ಜೈಲಿನಿಂದ ಪರಾರಿಯಾದ ಖೈದಿಗಳನ್ನು ಅಭಿಜಿತ್ ಗೊಗೋಯ್, ತಾರೊ ಹಮಾಮ್, ಕಲೋಮ್ ಅಪಾಂಗ್, ತಲುಮ್ ಪನ್ಯಾಂಗ್, ಸುಭಾಶ್ ಮೊಂಡಲ್, ರಾಜ ತಯೆಂಗ್ ಮತ್ತು ದನಿ ಗಮ್ಲಿನಾ ಎಂದು ಗುರುತಿಸಲಾಗಿದೆ. ಈ ಖದೀಮರು ಜೈಲಿನಿಂದ ಪರಾರಿಯಾಗಲು ಮೊದಲು ಯೋಜನೆ ಸಿದ್ದಪಡಿಸಿದ್ದು, ಅದಕ್ಕಾಗಿ ಮೆಣಸಿನ ಹುಡಿ ಮತ್ತು ಉಪ್ಪನ್ನು ಸಂಗ್ರಹಿಸಿಟ್ಟಿದ್ದರು ಎಂದು ವರದಿ ತಿಳಿಸಿದೆ.
ರವಿವಾರ ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ಊಟಕ್ಕಾಗಿ ಸೆಲ್ ತೆರೆದಾಗ ಈ ಏಳು ಮಂದಿ ಭದ್ರತಾ ಸಿಬ್ಬಂದಿಗೆ ಹಲ್ಲೆ ನಡೆಸಿ ಜೈಲಿನಿಂದ ಹೊರ ಹೋಗಿದ್ದಾರೆ.
ಐದು ಮಂದಿ ಜೈಲು ಸಿಬ್ಬಂದಿಗೆ ಗಾಯಗಳಾಗಿದೆ. ಅದರಲ್ಲೂ ಓರ್ವನ ತಲೆಗೆ ಗಂಭೀರವಾಗಿ ಏಟಾಗಿದ್ದು, ಆತನ ಮೊಬೈಲ್ ಫೋನನ್ನು ಕೂಡಾ ಖೈದಿಗಳನ್ನು ಕೊಂಡೊಯ್ದಿದ್ದಾರೆ. ಸದ್ಯ ಪರಾರಿಯಾಗಿರುವ ಖೈದಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…