ಗುವಾಹಟಿ: ಜೈಲಿನ ಸಿಬ್ಬಂದಿಗೆ ಹಲ್ಲೆ ಮಾಡಿ, ಅವರ ಮೇಲೆ ಮೆಣಸಿನ ಪುಡಿ ಎರಚಿ ಏಳು ಮಂದಿ ಖದೀಮರು ಜೈಲಿನಿಂದ ಪರಾರಿಯಾದ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ.
ಅರುಣಾಚಲ ಪ್ರದೇಶದ ಪೂರ್ವ ಸಿಯಾಂಗ್ ಜಿಲ್ಲೆಯ ಜೈಲಿನಲ್ಲಿ ರವಿವಾರ ಈ ಘಟನೆ ನಡೆದಿದೆ.
ಜೈಲಿನಿಂದ ಪರಾರಿಯಾದ ಖೈದಿಗಳನ್ನು ಅಭಿಜಿತ್ ಗೊಗೋಯ್, ತಾರೊ ಹಮಾಮ್, ಕಲೋಮ್ ಅಪಾಂಗ್, ತಲುಮ್ ಪನ್ಯಾಂಗ್, ಸುಭಾಶ್ ಮೊಂಡಲ್, ರಾಜ ತಯೆಂಗ್ ಮತ್ತು ದನಿ ಗಮ್ಲಿನಾ ಎಂದು ಗುರುತಿಸಲಾಗಿದೆ. ಈ ಖದೀಮರು ಜೈಲಿನಿಂದ ಪರಾರಿಯಾಗಲು ಮೊದಲು ಯೋಜನೆ ಸಿದ್ದಪಡಿಸಿದ್ದು, ಅದಕ್ಕಾಗಿ ಮೆಣಸಿನ ಹುಡಿ ಮತ್ತು ಉಪ್ಪನ್ನು ಸಂಗ್ರಹಿಸಿಟ್ಟಿದ್ದರು ಎಂದು ವರದಿ ತಿಳಿಸಿದೆ.
ರವಿವಾರ ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ಊಟಕ್ಕಾಗಿ ಸೆಲ್ ತೆರೆದಾಗ ಈ ಏಳು ಮಂದಿ ಭದ್ರತಾ ಸಿಬ್ಬಂದಿಗೆ ಹಲ್ಲೆ ನಡೆಸಿ ಜೈಲಿನಿಂದ ಹೊರ ಹೋಗಿದ್ದಾರೆ.
ಐದು ಮಂದಿ ಜೈಲು ಸಿಬ್ಬಂದಿಗೆ ಗಾಯಗಳಾಗಿದೆ. ಅದರಲ್ಲೂ ಓರ್ವನ ತಲೆಗೆ ಗಂಭೀರವಾಗಿ ಏಟಾಗಿದ್ದು, ಆತನ ಮೊಬೈಲ್ ಫೋನನ್ನು ಕೂಡಾ ಖೈದಿಗಳನ್ನು ಕೊಂಡೊಯ್ದಿದ್ದಾರೆ. ಸದ್ಯ ಪರಾರಿಯಾಗಿರುವ ಖೈದಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…