Featured

ಜೈಶ್ ಎ ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ಭಾರತಕ್ಕೆ ಒಪ್ಪಿಸಿ : ಪಾಕ್ ಗೆ ಸುಷ್ಮಾ ಸ್ವರಾಜ್ – Vishwanews24

ನವದೆಹಲಿ: ತನ್ನ ನೆಲದಲ್ಲಿರುವ ಭಯೋತ್ಪಾದಕ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಕಿಸ್ತಾನದ ಜೊತೆಗೆ ಶಾಂತಿ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಅವರು ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕೆಲವರು ಪಾಕಿಸ್ತಾನ ಪ್ರಧಾನಿ ಉತ್ತಮ ಆಡಳಿತಗಾರ ಎಂದು ಹೇಳುತ್ತಾರೆ. ಅವರು ಅಷ್ಟು ಪ್ರಾಮಾಣಿಕ, ಉದಾರ ಮನಸ್ಸಿನ ವ್ಯಕ್ತಿಯಾಗಿದ್ದರೆ ಜೈಶ್ ಎ ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ಭಾರತಕ್ಕೆ ಹಸ್ತಾಂತರಿಸಲಿ. ಆಗ ಅವರ ಪ್ರಾಮಾಣಿಕತೆಯನ್ನು ಒಪ್ಪುತ್ತೇವೆ ಎಂದರು.

ಉಗ್ರವಾದಕ್ಕೆ ಪ್ರೇರಣೆ ನೀಡುತ್ತಲೇ ಮಾತುಕತೆಗೆ ಆಹ್ವಾನಿಸುತ್ತೀರಿ. ಉಗ್ರವಾದ ಹಾಗೂ ಮಾತುಕತೆ ಒಮ್ಮೆಗೇ ಸಾಧ್ಯವಿಲ್ಲ ಎಂದು ಪಾಕ್ ಸರ್ಕಾರವನ್ನು ಕುಟುಕಿದ ಅವರು, ಭಯೋತ್ಪಾದನೆ ನಿರ್ನಾಮಗೊಳಿಸಲು ಪಾಕ್​ ಸರ್ಕಾರದ ಜೊತೆಗೆ ಭಾರತ ಕೈಜೋಡಿಸುವುದಾಗಿ ಭರವಸೆ ನೀಡಿದರು.ಶಾಂತಿ ಮಾತುಕತೆ ಒಟ್ಟೊಟ್ಟಿಗೆ ಸಾಗುವುದಿಲ್ಲ ಎಂದು ಹೇಳಿದರು.

ಬಾಲಕೋಟ್ ನಲ್ಲಿ ಭಾರತೀಯ ವಾಯುದಾಳಿಗೆ ಪಾಕಿಸ್ತಾನದ ಪ್ರತ್ಯುತ್ತರದ ಬಗ್ಗೆ ಪ್ರಶ್ನಿಸಿದಾಗ ಸುಷ್ಮಾ ಸ್ವರಾಜ್, ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯನ್ನೇ ಗುರಿಯಾಗಿಟ್ಟುಕೊಂಡು ಭಾರತ ವಾಯುದಾಳಿ ಮಾಡಿದೆ. ಆದರೆ ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಮಿಲಿಟರಿ ಜೈಶ್ ಎ ಮೊಹಮ್ಮದ್ ಪರವಾಗಿ ನಮ್ಮ ಮೇಲೇಕೆ ದಾಳಿ ಮಾಡಬೇಕು ಎಂದು ಪ್ರಶ್ನಿಸಿದರು.

ನೀವು ಜೆಇಎಂ ಸಂಘಟನೆಯನ್ನು ನಿಮ್ಮ ಮಣ್ಣಿನಲ್ಲಿ ಸಾಕಿ ಬೆಳೆಸಿ ಪೋಷಿಸುತ್ತಿದ್ದೀರಿ. ಭಾರತ ಅದಕ್ಕೆ ಪ್ರತಿಯಾಗಿ ದಾಳಿ ಮಾಡಿದಾಗ ಭಯೋತ್ಪಾದಕರ ಪರವಾಗಿ ನೀವು ದಾಳಿ ಮಾಡುತ್ತೀರಿ ಎಂದು ಪಾಕಿಸ್ತಾನ ಸರ್ಕಾರದ ಮೇಲೆ ಸುಷ್ಮಾ ಸ್ವರಾಜ್ ಹರಿಹಾಯ್ದರು. ಭಾರತ ಮತ್ತು ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧವನ್ನು ನಾಶಗೊಳಿಸಲು ಹೊರಟಿರುವ ಐಎಸ್ಐ ಮತ್ತು ಅದರ ಸೇನೆಯನ್ನು ನಿಯಂತ್ರಿಸಬೇಕಾದ ಅಗತ್ಯವಿದೆ ಎಂದರು.

 

 

 

 

 

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago