Featured

ಜೈಶ್ ಎ ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ಭಾರತಕ್ಕೆ ಒಪ್ಪಿಸಿ : ಪಾಕ್ ಗೆ ಸುಷ್ಮಾ ಸ್ವರಾಜ್ – Vishwanews24

ನವದೆಹಲಿ: ತನ್ನ ನೆಲದಲ್ಲಿರುವ ಭಯೋತ್ಪಾದಕ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಕಿಸ್ತಾನದ ಜೊತೆಗೆ ಶಾಂತಿ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಅವರು ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕೆಲವರು ಪಾಕಿಸ್ತಾನ ಪ್ರಧಾನಿ ಉತ್ತಮ ಆಡಳಿತಗಾರ ಎಂದು ಹೇಳುತ್ತಾರೆ. ಅವರು ಅಷ್ಟು ಪ್ರಾಮಾಣಿಕ, ಉದಾರ ಮನಸ್ಸಿನ ವ್ಯಕ್ತಿಯಾಗಿದ್ದರೆ ಜೈಶ್ ಎ ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ಭಾರತಕ್ಕೆ ಹಸ್ತಾಂತರಿಸಲಿ. ಆಗ ಅವರ ಪ್ರಾಮಾಣಿಕತೆಯನ್ನು ಒಪ್ಪುತ್ತೇವೆ ಎಂದರು.

ಉಗ್ರವಾದಕ್ಕೆ ಪ್ರೇರಣೆ ನೀಡುತ್ತಲೇ ಮಾತುಕತೆಗೆ ಆಹ್ವಾನಿಸುತ್ತೀರಿ. ಉಗ್ರವಾದ ಹಾಗೂ ಮಾತುಕತೆ ಒಮ್ಮೆಗೇ ಸಾಧ್ಯವಿಲ್ಲ ಎಂದು ಪಾಕ್ ಸರ್ಕಾರವನ್ನು ಕುಟುಕಿದ ಅವರು, ಭಯೋತ್ಪಾದನೆ ನಿರ್ನಾಮಗೊಳಿಸಲು ಪಾಕ್​ ಸರ್ಕಾರದ ಜೊತೆಗೆ ಭಾರತ ಕೈಜೋಡಿಸುವುದಾಗಿ ಭರವಸೆ ನೀಡಿದರು.ಶಾಂತಿ ಮಾತುಕತೆ ಒಟ್ಟೊಟ್ಟಿಗೆ ಸಾಗುವುದಿಲ್ಲ ಎಂದು ಹೇಳಿದರು.

ಬಾಲಕೋಟ್ ನಲ್ಲಿ ಭಾರತೀಯ ವಾಯುದಾಳಿಗೆ ಪಾಕಿಸ್ತಾನದ ಪ್ರತ್ಯುತ್ತರದ ಬಗ್ಗೆ ಪ್ರಶ್ನಿಸಿದಾಗ ಸುಷ್ಮಾ ಸ್ವರಾಜ್, ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯನ್ನೇ ಗುರಿಯಾಗಿಟ್ಟುಕೊಂಡು ಭಾರತ ವಾಯುದಾಳಿ ಮಾಡಿದೆ. ಆದರೆ ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಮಿಲಿಟರಿ ಜೈಶ್ ಎ ಮೊಹಮ್ಮದ್ ಪರವಾಗಿ ನಮ್ಮ ಮೇಲೇಕೆ ದಾಳಿ ಮಾಡಬೇಕು ಎಂದು ಪ್ರಶ್ನಿಸಿದರು.

ನೀವು ಜೆಇಎಂ ಸಂಘಟನೆಯನ್ನು ನಿಮ್ಮ ಮಣ್ಣಿನಲ್ಲಿ ಸಾಕಿ ಬೆಳೆಸಿ ಪೋಷಿಸುತ್ತಿದ್ದೀರಿ. ಭಾರತ ಅದಕ್ಕೆ ಪ್ರತಿಯಾಗಿ ದಾಳಿ ಮಾಡಿದಾಗ ಭಯೋತ್ಪಾದಕರ ಪರವಾಗಿ ನೀವು ದಾಳಿ ಮಾಡುತ್ತೀರಿ ಎಂದು ಪಾಕಿಸ್ತಾನ ಸರ್ಕಾರದ ಮೇಲೆ ಸುಷ್ಮಾ ಸ್ವರಾಜ್ ಹರಿಹಾಯ್ದರು. ಭಾರತ ಮತ್ತು ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧವನ್ನು ನಾಶಗೊಳಿಸಲು ಹೊರಟಿರುವ ಐಎಸ್ಐ ಮತ್ತು ಅದರ ಸೇನೆಯನ್ನು ನಿಯಂತ್ರಿಸಬೇಕಾದ ಅಗತ್ಯವಿದೆ ಎಂದರು.

 

 

 

 

 

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

9 minutes ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

4 hours ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

8 hours ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

9 hours ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

9 hours ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

9 hours ago