Featured

ಜೈ ಶ್ರೀರಾಮ್‌‘ ಎನ್ನುವುದು ರಾಜಕೀಯ ಘೋಷಣೆಯಲ್ಲ, ಭಗವಾನ್ ರಾಮ ಈ ದೇಶದ ಹೆಮ್ಮೆ : ಶಿವಸೇನೆ ಮುಖಂಡ ಸಂಜಯ್ ರಾವುತ್ -Vishwanews24

ಜೈ ಶ್ರೀರಾಮ್‌‘ ಎನ್ನುವುದು ರಾಜಕೀಯ ಘೋಷಣೆಯಲ್ಲ, ಭಗವಾನ್ ರಾಮ ಈ ದೇಶದ ಹೆಮ್ಮೆ : ಶಿವಸೇನೆ ಮುಖಂಡ ಸಂಜಯ್ ರಾವುತ್ -Vishwanews24

ಮುಂಬೈ: ‘ಜೈ ಶ್ರೀರಾಮ್‌‘ ಎನ್ನುವುದು ರಾಜಕೀಯ ಘೋಷಣೆಯಲ್ಲ. ಇದು ನಂಬಿಕೆಯ ವಿಷಯ. ಈ ಘೋಷಣೆಯಿಂದ ಯಾರೊಬ್ಬರ ಜಾತ್ಯತೀತತೆಗೂ ಧಕ್ಕೆ ಆಗುವುದಿಲ್ಲ’ ಎಂದು ರಾಜ್ಯಸಭೆ ಸದಸ್ಯ, ಶಿವಸೇನೆ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.

‘ಈಚೆಗೆ ಕೋಲ್ಕತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದಾಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನೋವಾಗಿದೆ’ ಎಂಬ ಬಿಜೆಪಿ ಆರೋಪಿಸಿರುವ ಕುರಿತು ಗಮನಸೆಳೆದಾಗ ರಾವುತ್ ಹೀಗೆ ಪ್ರತಿಕ್ರಿಯಿಸಿದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾವುತ್, ‘ಭಗವಾನ್ ರಾಮ ಈ ದೇಶದ ಹೆಮ್ಮೆ. ಇದು, ನಂಬಿಕೆಗೆ ಸಂಬಂಧಿಸಿದೆ. ಮಮತಾ ದೀದಿಗೂ ಭಗವಾನ್ ಶ್ರೀರಾಮನ ಮೇಲೆ ನಂಬಿಕೆ ಇರುವ ಬಗ್ಗೆ ನನಗೆ ಖಾತ್ರಿಯಿದೆ‘ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಜೈ ಶ್ರೀರಾಮ್‌‘ ಎಂದು ಘೋಷಣೆ ಕೂಗುವಂತೆ ಯಾರನ್ನೂ ಒತ್ತಾಯಿಸುವುದಿಲ್ಲ : ಯೋಗಿ ಆದಿತ್ಯನಾಥ್ -Vishwanews24

ಈ ಕುರಿತು ಶಿವಸೇನೆ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ, ‘ಅಂದು ‘ಜೈ ಶ್ರೀರಾಮ್‘ ಘೋಷಣೆ ಕೇಳಿ ಮಮತಾ ಬ್ಯಾನರ್ಜಿ ವಿಚಲಿತರಾಗುವ ಅಗತ್ಯವಿರಲಿಲ್ಲ. ಅಲ್ಲದೆ, ಘೋಷಣೆ ಕೂಗಿದವರ ಜೊತೆ ಮಮತಾ ಮಾತು ಮುಂದುವರಿಸಿದ್ದರೆ ಗಲಾಟೆ ಆಗುತ್ತಿತ್ತೇನೋ? ಆದರೆ, ಎಲ್ಲ ಮತ ಬ್ಯಾಂಕ್‌ಗಳತ್ತ ಗಮನ ಕೇಂದ್ರೀಕರಿಸಿದ್ದಾರೆ’ ಎಂದು ಉಲ್ಲೇಖಿಸಿದೆ.
‘ಮಮತಾ ಬ್ಯಾನರ್ಜಿ ಅವರಲ್ಲಿರುವ ‘ದೌರ್ಬಲ್ಯ ಅಂಶ‘ಗಳನ್ನು ಬಿಜೆಪಿ ಗುರುತಿಸಿದೆ. ವಿಧಾನಸಭಾ ಚುನಾವಣೆ ಮುಗಿಯವವರೆಗೂ ಅವರ ಇಂಥ ಸೂಕ್ಷ್ಮ, ಭಾವನಾತ್ಮಕ ಅಂಶಗಳನ್ನು ಬಳಸಿ ಆಟವಾಡಲಿದೆ’ ಎಂದು ಸಂಪಾದಕೀಯದಲ್ಲಿ ಶಿವಸೇನೆ ತರಾಟೆ ತೆಗೆದುಕೊಂಡಿದೆ.

ಸಂಪಾದಕೀಯದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಲಾಗಿದ್ದು, ಚುನಾವಣೆಯಲ್ಲಿ ಮಮತಾ ಅವರನ್ನು ಸೋಲಿಸಲು ಅವರದೇ ಪಕ್ಷ ಟಿಎಂಸಿ ಮುಖಂಡರನ್ನು ಸೆಳೆಯುತ್ತಿದೆ ಎಂದಿದೆ.
ಸದ್ಯ, ಪಶ್ಚಿಮ ಬಂಗಾಳ, ಪಂಜಾಬ್‌ ಮತ್ತು ಮಹಾರಾಷ್ಟ್ರ ರಾಜ್ಯಗಳು ‘ದೇಶದ ಸ್ವಾತಂತ್ರ್ಯ ಹೋರಾಟ’ದ ಮುಂಚೂಣಿಯಲ್ಲಿವೆ. ಈ ರಾಜ್ಯಗಳು ಸದ್ಯ, ತನ್ನ ಆತ್ಮಗೌರವಕ್ಕಾಗಿ ಹೋರಾಟ ನಡೆಸುತ್ತಿವೆ. ಕೇಂದ್ರ ಇದರ ವಿರುದ್ಧವಾಗಿದೆ ಎಂದು ಬರೆಯಲಾಗಿದೆ.

ಇದನ್ನೂ ಓದಿ : ಮಂಗಳೂರು: ಕೇಂದ್ರ ಸರಕಾರದ ರೈತ ವಿರೋಧಿ ಮಸೂದೆ ಖಂಡಿಸಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ.. Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

11 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

11 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

11 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

11 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

12 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

12 hours ago