ಹೊಸದಿಲ್ಲಿ: ಜನರು ಜೈ ಶ್ರೀರಾಮ್ ಎಂಬ ಘೋಷಣೆ ಕೂಗುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಟೀಮ್ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ ಹೇಳಿದ್ದಾರೆ. ಜೈ ಶ್ರೀರಾಮ್ ಅಥವಾ ಅಲ್ಲಾಹು ಅಕ್ಬರ್ ಎಂದು ಸಾವಿರ ಬಾರಿ ಹೇಳುವುದರಿಂದ ಯಾವುದೇ ಹಾನಿಯಾಗುವುದಿಲ್ಲ ಎಂದು ಹೇಳುವ ಮೂಲಕ ಶಮಿ ರಾಷ್ಟ್ರೀಯತೆ ಮೆರೆದಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ್ದರು. ಈ ಸಂದರ್ಭದಲ್ಲಿ ದೇಶದೆಲ್ಲೆಡೆ ಭಗವಾನ್ ಶ್ರೀ ರಾಮನ ಘೋಷಣೆಗಳು ಮೊಳಗಿದ್ದವು. ಈ ಕುರಿತು ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಪ್ರತಿಕ್ರಿಯಿಸಿದ್ದಾರೆ.
ಸಂವಾದ ಕಾರ್ಯಕ್ರಮದಲ್ಲಿ ದೇಶದಲ್ಲಿ ಪ್ರಚಲಿತದಲ್ಲಿರುವ ಧಾರ್ಮಿಕತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಟೀಮ್ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ ಉತ್ತರಿಸಿದ್ದಾರೆ.
“ಪ್ರತಿ ಧರ್ಮದಲ್ಲಿ ನೀವು ವಿರುದ್ಧ ಧರ್ಮದ ವ್ಯಕ್ತಿಯನ್ನು ಇಷ್ಟಪಡದ 5 ರಿಂದ 10 ಜನರನ್ನು ನೋಡುತ್ತೀರಿ. ಆದರ ವಿರುದ್ಧ ನನಗೆ ಯಾವುದೇ ಆಕ್ಷೇಪಣೆ ಇಲ್ಲ. ವಿಷಯ ಹೇಗೆ ಬರುತ್ತದೋ ಅದಕ್ಕೆ ನಾನು ನಮಿಸುತ್ತೇನೆ. ರಾಮಮಂದಿರ ನಿರ್ಮಾಣದ ಸಮಯದಲ್ಲಿ ಶ್ರೀ ರಾಮನ ಹೆಸರನ್ನು ಜಪಿಸಿದರೆ ಅದರಿಂದ ಆಗುವ ಹಾನಿ ಏನು? 1000 ಬಾರಿ ಹೇಳುತ್ತೇನೆ. ನಾನು ಕೂಡ ಅಲ್ಲಾಹು ಅಕ್ಬರ್ ಎಂದು ಹೇಳಲು ಬಯಸಿದರೆ 1000 ಬಾರಿ ಹೇಳುತ್ತೇನೆ. ಅದರಿಂದ ಏನು ವ್ಯತ್ಯಾಸವಾಗುತ್ತದೆ?” ಎಂದು ಅನುಭವಿ ವೇಗಿ ಪ್ರಶ್ನಿಸಿದ್ದಾರೆ.
ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…