Featured

ಜೈ ಶ್ರೀರಾಮ್ ಘೋಷಣೆಯನ್ನು ಬಿಜೆಪಿ ರಾಜಕೀಯವಾಗಿ ಬಳಕೆ ಮಾಡುತ್ತಿದೆ : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತ್ತಾ : ಬಿಜೆಪಿಯು ಜೈಶ್ರೀರಾಮ್ ಘೋಷಣೆ ಮೂಲಕ ರಾಜಕಾರಣದಲ್ಲಿ ಧರ್ಮವನ್ನು ಬೆರೆಸುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

ಬಿಜೆಪಿಯು 10 ಲಕ್ಷ ಜೈಶ್ರೀರಾಮ್ ಎಂಬ ಪೋಸ್ಟ್ ಕಾರ್ಡ್ ಗಳನ್ನು ಮಮತಾರಿಗೆ ಕಳುಹಿಸಲು ಪ್ಲಾನ್ ಮಾಡಿಕೊಂಡಿದೆ ಎಂಬ ಸುದ್ದಿ ಹರಡಿದ ಬೆನ್ನಲ್ಲೇ ಫೇಸ್ ಬುಕ್ ನಲ್ಲಿ ದೀದಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಅದರ ನಾಯಕರು ಜೈ ಶ್ರೀರಾಮ್ ಎಂಬ ಧಾರ್ಮಿಕ ಘೋಷಣೆಯನ್ನೇ ತಮ್ಮ ಪಕ್ಷದ ಘೋಷಣೆಯನ್ನಾಗಿ ಮಾಡಿಕೊಂಡಿದ್ದಾರೆ. ಬಿಜೆಪಿಯ ಮಾಧ್ಯಮಗಳು ಹಾಗೂ ಸುಳ್ಳು ವಿಡಿಯೋ, ಸುದ್ದಿ ತಪ್ಪು ಮಾಹಿತಿ ಮೂಲಕ ತಮ್ಮ ತತ್ವಗಳನ್ನು ಹರಡುತ್ತಿದ್ದಾರೆ. ಅಲ್ಲದೇ ಸತ್ಯ ಹಾಗೂ ನೈಜತೆ ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದರು.

ರಾಜಾರಾಮ್ ಮೋಹನ್ ರಾಯ್ ರಿಂದ ವಿದ್ಯಾಸಾಗರ್ ವರೆಗೆ ಹಲವು ಸಮಾಜ ಸುಧಾರಕರು ಬಂಗಾಳದ ಸಹಿಷ್ಣುತೆ, ಅಭಿವೃದ್ಧಿಗೆ ಕೊಡುವೆ ನೀಡಿದ್ದಾರೆ. ಆದರೆ, ಬಿಜೆಪಿ ಬಂಗಾಳವನ್ನು ಟಾರ್ಗೆಟ್ ಮಾಡಿದೆ ಎಂದು ಹೇಳಿದ್ದಾರೆ.

ಸಮಾವೇಶಗಳಲ್ಲಿ ರಾಜಕೀಯ ಪಕ್ಷಗಳ ಯಾವುದೇ ಘೋಷಣೆಗಳ ಬಗ್ಗೆ ನನಗೆ ತಕರಾರು ಇಲ್ಲ. ಆದರೆ ಜೈ ಸಿಯಾ ರಾಮ್, ಜೈ ರಾಮ್ ಜಿ ಕೀ, ರಾಮ್ ನಾಮ್ ಸತ್ಯ ಹೈ ಈ ಘೋಷಣೆಗಳು ಧಾರ್ಮಿಕ ಹಾಗೂ ಸಾಮಾಜಿಕ ಸಂಬಂಧ ಹೊಂದಿವೆ. ಈ ಭಾವನೆಗಳನ್ನು ನಾವು ಗೌರವಿಸುತ್ತೇವೆ, ಆದರೆ ಜೈ ಶ್ರೀರಾಮ್ ಘೋಷಣೆಯನ್ನು ಬಿಜೆಪಿ ರಾಜಕೀಯವಾಗಿ ಬಳಕೆ ಮಾಡುತ್ತಿದ್ದು, ಧಾರ್ಮಿಕತೆಯನ್ನು ರಾಜಕೀಯದೊಂದಿಗೆ ತಳುಕು ಹಾಕುತ್ತಿದೆ. ಇದು ವಿಧ್ವಂಸಕತೆ ಮತ್ತು ಹಿಂಸೆಯ ಮೂಲಕ ದ್ವೇಷವನ್ನು ಹರಡುವ ಸ್ಪಷ್ಟ ಉದ್ದೇಶ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

18 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

18 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

18 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

19 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

19 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

20 hours ago