Featured

ಜೈ ಶ್ರೀರಾಮ್ ಘೋಷಣೆಯನ್ನು ಬಿಜೆಪಿ ರಾಜಕೀಯವಾಗಿ ಬಳಕೆ ಮಾಡುತ್ತಿದೆ : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತ್ತಾ : ಬಿಜೆಪಿಯು ಜೈಶ್ರೀರಾಮ್ ಘೋಷಣೆ ಮೂಲಕ ರಾಜಕಾರಣದಲ್ಲಿ ಧರ್ಮವನ್ನು ಬೆರೆಸುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

ಬಿಜೆಪಿಯು 10 ಲಕ್ಷ ಜೈಶ್ರೀರಾಮ್ ಎಂಬ ಪೋಸ್ಟ್ ಕಾರ್ಡ್ ಗಳನ್ನು ಮಮತಾರಿಗೆ ಕಳುಹಿಸಲು ಪ್ಲಾನ್ ಮಾಡಿಕೊಂಡಿದೆ ಎಂಬ ಸುದ್ದಿ ಹರಡಿದ ಬೆನ್ನಲ್ಲೇ ಫೇಸ್ ಬುಕ್ ನಲ್ಲಿ ದೀದಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಅದರ ನಾಯಕರು ಜೈ ಶ್ರೀರಾಮ್ ಎಂಬ ಧಾರ್ಮಿಕ ಘೋಷಣೆಯನ್ನೇ ತಮ್ಮ ಪಕ್ಷದ ಘೋಷಣೆಯನ್ನಾಗಿ ಮಾಡಿಕೊಂಡಿದ್ದಾರೆ. ಬಿಜೆಪಿಯ ಮಾಧ್ಯಮಗಳು ಹಾಗೂ ಸುಳ್ಳು ವಿಡಿಯೋ, ಸುದ್ದಿ ತಪ್ಪು ಮಾಹಿತಿ ಮೂಲಕ ತಮ್ಮ ತತ್ವಗಳನ್ನು ಹರಡುತ್ತಿದ್ದಾರೆ. ಅಲ್ಲದೇ ಸತ್ಯ ಹಾಗೂ ನೈಜತೆ ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದರು.

ರಾಜಾರಾಮ್ ಮೋಹನ್ ರಾಯ್ ರಿಂದ ವಿದ್ಯಾಸಾಗರ್ ವರೆಗೆ ಹಲವು ಸಮಾಜ ಸುಧಾರಕರು ಬಂಗಾಳದ ಸಹಿಷ್ಣುತೆ, ಅಭಿವೃದ್ಧಿಗೆ ಕೊಡುವೆ ನೀಡಿದ್ದಾರೆ. ಆದರೆ, ಬಿಜೆಪಿ ಬಂಗಾಳವನ್ನು ಟಾರ್ಗೆಟ್ ಮಾಡಿದೆ ಎಂದು ಹೇಳಿದ್ದಾರೆ.

ಸಮಾವೇಶಗಳಲ್ಲಿ ರಾಜಕೀಯ ಪಕ್ಷಗಳ ಯಾವುದೇ ಘೋಷಣೆಗಳ ಬಗ್ಗೆ ನನಗೆ ತಕರಾರು ಇಲ್ಲ. ಆದರೆ ಜೈ ಸಿಯಾ ರಾಮ್, ಜೈ ರಾಮ್ ಜಿ ಕೀ, ರಾಮ್ ನಾಮ್ ಸತ್ಯ ಹೈ ಈ ಘೋಷಣೆಗಳು ಧಾರ್ಮಿಕ ಹಾಗೂ ಸಾಮಾಜಿಕ ಸಂಬಂಧ ಹೊಂದಿವೆ. ಈ ಭಾವನೆಗಳನ್ನು ನಾವು ಗೌರವಿಸುತ್ತೇವೆ, ಆದರೆ ಜೈ ಶ್ರೀರಾಮ್ ಘೋಷಣೆಯನ್ನು ಬಿಜೆಪಿ ರಾಜಕೀಯವಾಗಿ ಬಳಕೆ ಮಾಡುತ್ತಿದ್ದು, ಧಾರ್ಮಿಕತೆಯನ್ನು ರಾಜಕೀಯದೊಂದಿಗೆ ತಳುಕು ಹಾಕುತ್ತಿದೆ. ಇದು ವಿಧ್ವಂಸಕತೆ ಮತ್ತು ಹಿಂಸೆಯ ಮೂಲಕ ದ್ವೇಷವನ್ನು ಹರಡುವ ಸ್ಪಷ್ಟ ಉದ್ದೇಶ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago