ಹೊಸದಿಲ್ಲಿ: ‘ಪಶ್ಚಿಮ ಬಂಗಾಲದ ನೆಲದಲ್ಲಿ ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತೇನೆ. ಧೈರ್ಯವಿದ್ದರೆ ನನ್ನನ್ನು ಬಂಧಿಸಿ’. ಹೀಗೆಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿಗೆ ಸವಾಲು ಹಾಕಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ. ಸಿಎಂ ಮಮತಾ ಅವರ ಬೆಂಗಾವಲು ವಾಹನಗಳು ಸಾಗುವಾಗ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸೋಮವಾರ ದೀದಿಯ ಭದ್ರಕೋಟೆಯಲ್ಲೇ ನಿಂತು ಇಂಥ ಸವಾಲು ಹಾಕಿದ್ದಾರೆ.
ಪ.ಬಂಗಾಲದ ಜಾರ್ಗ್ರಾಮ್ನಲ್ಲಿ ಸೋಮವಾರ ಪ್ರಚಾರ ರ್ಯಾಲಿ ನಡೆಸಿದ ಪ್ರಧಾನಿ ಮೋದಿ, ‘ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಕೆಲವರನ್ನು ಸ್ಪೀಡ್ಬ್ರೇಕರ್ ದೀದಿ ಜೈಲಿಗಟ್ಟಿದ್ದಾರೆ. ಇಂದು ಇದೇ ಸ್ಥಳದಲ್ಲಿ ನಿಂತು ನಾನೂ ಅದೇ ಘೋಷಣೆ ಕೂಗುತ್ತೇನೆ. ತಾಕತ್ತಿದ್ದರೆ ಅವರು ನನ್ನನ್ನೂ ಬಂಧಿಸಲಿ. ಆ ಮೂಲಕವಾದರೂ ಟಿಎಂಸಿಯ ದರ್ಪದ ಆಡಳಿತದಿಂದ ಪ.ಬಂಗಾಲದ ಜನರಿಗೆ ರಕ್ಷಣೆ ದೊರೆಯಲಿ’ ಎಂದಿದ್ದಾರೆ.
ಇದೇ ವೇಳೆ, ರಾಮಾಯಣ ಹಾಗೂ ಮಹಾಭಾರತ ಕುರಿತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆಡಿರುವ ಮಾತುಗಳ ವಿರುದ್ಧವೂ ಗುಡುಗಿದ ಮೋದಿ, ‘ಹಿಂದೂ ಧರ್ಮದ ವಿರುದ್ಧ ಅವ ಹೇಳನಕಾರಿ ಪದ ಬಳಕೆ ಮಾಡುವುದು ಕಮ್ಯೂನಿಸ್ಟರಿಗೆ ಫ್ಯಾಷನ್ ಆಗಿಬಿಟ್ಟಿದೆ’ ಎಂದಿದ್ದಾರೆ. ಇತ್ತೀಚೆಗೆ ಯೆಚೂರಿ ಅವರು, ರಾಮಾಯಣ- ಮಹಾಭಾರತವು ಹಿಂಸೆಯ ಘಟನೆಗಳಿಂದ ಕೂಡಿವೆ ಎಂದಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…