ಹೊಸದಿಲ್ಲಿ: ‘ಪಶ್ಚಿಮ ಬಂಗಾಲದ ನೆಲದಲ್ಲಿ ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತೇನೆ. ಧೈರ್ಯವಿದ್ದರೆ ನನ್ನನ್ನು ಬಂಧಿಸಿ’. ಹೀಗೆಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿಗೆ ಸವಾಲು ಹಾಕಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ. ಸಿಎಂ ಮಮತಾ ಅವರ ಬೆಂಗಾವಲು ವಾಹನಗಳು ಸಾಗುವಾಗ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸೋಮವಾರ ದೀದಿಯ ಭದ್ರಕೋಟೆಯಲ್ಲೇ ನಿಂತು ಇಂಥ ಸವಾಲು ಹಾಕಿದ್ದಾರೆ.
ಪ.ಬಂಗಾಲದ ಜಾರ್ಗ್ರಾಮ್ನಲ್ಲಿ ಸೋಮವಾರ ಪ್ರಚಾರ ರ್ಯಾಲಿ ನಡೆಸಿದ ಪ್ರಧಾನಿ ಮೋದಿ, ‘ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಕೆಲವರನ್ನು ಸ್ಪೀಡ್ಬ್ರೇಕರ್ ದೀದಿ ಜೈಲಿಗಟ್ಟಿದ್ದಾರೆ. ಇಂದು ಇದೇ ಸ್ಥಳದಲ್ಲಿ ನಿಂತು ನಾನೂ ಅದೇ ಘೋಷಣೆ ಕೂಗುತ್ತೇನೆ. ತಾಕತ್ತಿದ್ದರೆ ಅವರು ನನ್ನನ್ನೂ ಬಂಧಿಸಲಿ. ಆ ಮೂಲಕವಾದರೂ ಟಿಎಂಸಿಯ ದರ್ಪದ ಆಡಳಿತದಿಂದ ಪ.ಬಂಗಾಲದ ಜನರಿಗೆ ರಕ್ಷಣೆ ದೊರೆಯಲಿ’ ಎಂದಿದ್ದಾರೆ.
ಇದೇ ವೇಳೆ, ರಾಮಾಯಣ ಹಾಗೂ ಮಹಾಭಾರತ ಕುರಿತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆಡಿರುವ ಮಾತುಗಳ ವಿರುದ್ಧವೂ ಗುಡುಗಿದ ಮೋದಿ, ‘ಹಿಂದೂ ಧರ್ಮದ ವಿರುದ್ಧ ಅವ ಹೇಳನಕಾರಿ ಪದ ಬಳಕೆ ಮಾಡುವುದು ಕಮ್ಯೂನಿಸ್ಟರಿಗೆ ಫ್ಯಾಷನ್ ಆಗಿಬಿಟ್ಟಿದೆ’ ಎಂದಿದ್ದಾರೆ. ಇತ್ತೀಚೆಗೆ ಯೆಚೂರಿ ಅವರು, ರಾಮಾಯಣ- ಮಹಾಭಾರತವು ಹಿಂಸೆಯ ಘಟನೆಗಳಿಂದ ಕೂಡಿವೆ ಎಂದಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…