Featured

ಜೈ ಶ್ರೀ ರಾಮ್‌ ಎಂದು ಘೋಷಣೆ ಕೂಗುತ್ತೇನೆ ಧೈರ್ಯವಿದ್ದರೆ ನನ್ನನ್ನು ಬಂಧಿಸಿ : ದೀದಿ ಭದ್ರಕೋಟೆಯಲ್ಲಿ ಪ್ರಧಾನಿ ಮೋದಿ ಸವಾಲು -Vishwanews24

ಹೊಸದಿಲ್ಲಿ: ‘ಪಶ್ಚಿಮ ಬಂಗಾಲದ ನೆಲದಲ್ಲಿ ಜೈ ಶ್ರೀ ರಾಮ್‌ ಎಂದು ಘೋಷಣೆ ಕೂಗುತ್ತೇನೆ. ಧೈರ್ಯವಿದ್ದರೆ ನನ್ನನ್ನು ಬಂಧಿಸಿ’. ಹೀಗೆಂದು ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿಗೆ ಸವಾಲು ಹಾಕಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ. ಸಿಎಂ ಮಮತಾ ಅವರ ಬೆಂಗಾವಲು ವಾಹನಗಳು ಸಾಗುವಾಗ ‘ಜೈ ಶ್ರೀ ರಾಮ್‌’ ಎಂದು ಘೋಷಣೆ ಕೂಗಿದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸೋಮವಾರ ದೀದಿಯ ಭದ್ರಕೋಟೆಯಲ್ಲೇ ನಿಂತು ಇಂಥ ಸವಾಲು ಹಾಕಿದ್ದಾರೆ.

ಪ.ಬಂಗಾಲದ ಜಾರ್‌ಗ್ರಾಮ್‌ನಲ್ಲಿ ಸೋಮವಾರ ಪ್ರಚಾರ ರ್ಯಾಲಿ ನಡೆಸಿದ ಪ್ರಧಾನಿ ಮೋದಿ, ‘ಜೈ ಶ್ರೀ ರಾಮ್‌ ಎಂದು ಘೋಷಣೆ ಕೂಗಿದ್ದಕ್ಕೆ ಕೆಲವರನ್ನು ಸ್ಪೀಡ್‌ಬ್ರೇಕರ್‌ ದೀದಿ ಜೈಲಿಗಟ್ಟಿದ್ದಾರೆ. ಇಂದು ಇದೇ ಸ್ಥಳದಲ್ಲಿ ನಿಂತು ನಾನೂ ಅದೇ ಘೋಷಣೆ ಕೂಗುತ್ತೇನೆ. ತಾಕತ್ತಿದ್ದರೆ ಅವರು ನನ್ನನ್ನೂ ಬಂಧಿಸಲಿ. ಆ ಮೂಲಕವಾದರೂ ಟಿಎಂಸಿಯ ದರ್ಪದ ಆಡಳಿತದಿಂದ ಪ.ಬಂಗಾಲದ ಜನರಿಗೆ ರಕ್ಷಣೆ ದೊರೆಯಲಿ’ ಎಂದಿದ್ದಾರೆ.

ಇದೇ ವೇಳೆ, ರಾಮಾಯಣ ಹಾಗೂ ಮಹಾಭಾರತ ಕುರಿತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆಡಿರುವ ಮಾತುಗಳ ವಿರುದ್ಧವೂ ಗುಡುಗಿದ ಮೋದಿ, ‘ಹಿಂದೂ ಧರ್ಮದ ವಿರುದ್ಧ ಅವ ಹೇಳನಕಾರಿ ಪದ ಬಳಕೆ ಮಾಡುವುದು ಕಮ್ಯೂನಿಸ್ಟರಿಗೆ ಫ್ಯಾಷನ್‌ ಆಗಿಬಿಟ್ಟಿದೆ’ ಎಂದಿದ್ದಾರೆ. ಇತ್ತೀಚೆಗೆ ಯೆಚೂರಿ ಅವರು, ರಾಮಾಯಣ- ಮಹಾಭಾರತವು ಹಿಂಸೆಯ ಘಟನೆಗಳಿಂದ ಕೂಡಿವೆ ಎಂದಿದ್ದರು.

 

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago