ಬೆಂಗಳೂರು: ಜೊಮ್ಯಾಟೋ ಆಹಾರ ಡೆಲಿವರಿ ಸಂದರ್ಭ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಜೊಮ್ಯಾಟೋ ಡೆಲಿವರಿ ಬಾಯ್ ಕಾಮರಾಜ್ ಯುವತಿ ಹಿತೇಶಾ ಚಂದ್ರಾನಿ ಎಫ್ಐಆರ್ ದಾಖಲಿಸುತ್ತಿದ್ದಂತೆಯೇ ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದಾಳೆ.
ಆಹಾರ ಡೆಲಿವರಿ ವಿಳಂಬವನ್ನು ಪ್ರಶ್ನಿಸಿದ್ದ ಯುವತಿ ಹಿತೇಶಾ ಚಂದ್ರಾನಿ ಮೇಲೆ ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮರಾಜ್ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯನ್ನು ಸಂಪರ್ಕರಿಸಲು ಯತ್ನಿಸಿದ್ದು, ಈ ವೇಳೆ ಮಹಿಳೆ ಬೆಂಗಳೂರಿನಿಂದ ಕಾಲ್ಕಿತ್ತಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ಬ್ರೇಕ್ : ರಾಜ್ಯ ವಕ್ಫ್ ಮಂಡಳಿ ಸುತ್ತೋಲೆ -Vishwanews24
ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆರೋಪ ಮಾಡಿದ್ದ ಮಹಿಳೆಯ ಹಿತೇಶ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲು ಸಂಪರ್ಕಿಸಲು ಯತ್ನಿಸಿದ್ದೆವು. ಆದರೆ, ಮಹಿಳೆ ನಗರದಿಂದ ಹೊರಹೋಗಿದ್ದು, ಮಹಾರಾಷ್ಟ್ರದಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿ ಇದ್ದಾರೆಂದು ತಿಳಿದುಬಂದಿದೆ ಎಂದು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಮಾಹಿತಿ ನೀಡಿದ್ದಾರೆ.
ನಗರಕ್ಕೆ ಬಂದ ಕೂಡಲೇ ಹೇಳಿಕೆ ನೀಡುವಂತೆ ಮಹಿಳೆಗೆ ಸೂಚನೆ ನೀಡಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರೆಯಲಿದೆ. ಮಹಿಳೆ ಹೇಳಿಕೆ ನೀಡಲು ಬರದೇ ಹೋದರೆ, ಆಕೆಯನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…