ಬೆಂಗಳೂರು: ಜೊಮ್ಯಾಟೋ ಆಹಾರ ಡೆಲಿವರಿ ಸಂದರ್ಭ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಜೊಮ್ಯಾಟೋ ಡೆಲಿವರಿ ಬಾಯ್ ಕಾಮರಾಜ್ ಯುವತಿ ಹಿತೇಶಾ ಚಂದ್ರಾನಿ ಎಫ್ಐಆರ್ ದಾಖಲಿಸುತ್ತಿದ್ದಂತೆಯೇ ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದಾಳೆ.
ಆಹಾರ ಡೆಲಿವರಿ ವಿಳಂಬವನ್ನು ಪ್ರಶ್ನಿಸಿದ್ದ ಯುವತಿ ಹಿತೇಶಾ ಚಂದ್ರಾನಿ ಮೇಲೆ ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮರಾಜ್ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯನ್ನು ಸಂಪರ್ಕರಿಸಲು ಯತ್ನಿಸಿದ್ದು, ಈ ವೇಳೆ ಮಹಿಳೆ ಬೆಂಗಳೂರಿನಿಂದ ಕಾಲ್ಕಿತ್ತಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ಬ್ರೇಕ್ : ರಾಜ್ಯ ವಕ್ಫ್ ಮಂಡಳಿ ಸುತ್ತೋಲೆ -Vishwanews24
ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆರೋಪ ಮಾಡಿದ್ದ ಮಹಿಳೆಯ ಹಿತೇಶ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲು ಸಂಪರ್ಕಿಸಲು ಯತ್ನಿಸಿದ್ದೆವು. ಆದರೆ, ಮಹಿಳೆ ನಗರದಿಂದ ಹೊರಹೋಗಿದ್ದು, ಮಹಾರಾಷ್ಟ್ರದಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿ ಇದ್ದಾರೆಂದು ತಿಳಿದುಬಂದಿದೆ ಎಂದು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಮಾಹಿತಿ ನೀಡಿದ್ದಾರೆ.
ನಗರಕ್ಕೆ ಬಂದ ಕೂಡಲೇ ಹೇಳಿಕೆ ನೀಡುವಂತೆ ಮಹಿಳೆಗೆ ಸೂಚನೆ ನೀಡಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರೆಯಲಿದೆ. ಮಹಿಳೆ ಹೇಳಿಕೆ ನೀಡಲು ಬರದೇ ಹೋದರೆ, ಆಕೆಯನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…