Featured

ಜ್ಞಾನವಾಪಿ ಪ್ರಕರಣದಲ್ಲಿ ಮುಸ್ಲಿಂ ಪರ ವಾದಿಸುತ್ತಿದ್ದ ವಕೀಲ ಯಾದವ್ ಹೃದಯಾಘಾತದಿಂದ​ ನಿಧನ – Vishwanews24

ಜ್ಞಾನವಾಪಿ ಪ್ರಕರಣದಲ್ಲಿ ಮುಸ್ಲಿಂ ಪರ ವಾದಿಸುತ್ತಿದ್ದ ವಕೀಲ ಯಾದವ್ ಹೃದಯಾಘಾತದಿಂದ​ ನಿಧನ

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಶೃಂಗಾರ್ ಗೌರಿ ಪ್ರಕರಣಗಳಲ್ಲಿ ಮುಸ್ಲಿಮ್ ಬಣದ ಪರವಾಗಿ ವಾದಿಸುತ್ತಿರುವ ವಕೀಲರ ಪೈಕಿ ಓರ್ವರಾಗಿರುವ ಅಭಯ್‌ನಾಥ್ ಯಾದವ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

62 ವರ್ಷದ ಅಭಯ್‍ನಾಥ್ ಭಾನುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದು ಇಂದು ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಸುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಜುಲೈ 31 ರ ಭಾನುವಾರ ತಡರಾತ್ರಿ ಎದೆ ನೋವು ಕಾಣಿಸಿಕೊಂಡಿದ್ದು ಕುಟುಂಬಸ್ಥರು ಅವರನ್ನು ಮಕ್ಬೂಲ್ ಆಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ವೈದ್ಯರು ಚಿಕಿತ್ಸೆ ನೀಡುವಾಗ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ವಾರಣಾಸಿಯ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಮುಸ್ಲಿಂ ಪರ ಎಲ್ಲಾ ಪ್ರಕರಣಗಳಲ್ಲಿ ಅಭಯ್ ನಾಥ್ ಯಾದವ್ ಮುಖ್ಯ ವಕೀಲರಾಗಿ ಇಡೀ ಪ್ರಕರಣವನ್ನು ನೋಡಿಕೊಳ್ಳುತ್ತಿದ್ದರು.

ಇದನ್ನೂ ಓದಿ :

ನ್ಯಾಯಾಲಯದಲ್ಲಿ ಮುಸ್ಲಿಂ ಪರವಾಗಿ ಏಕಾಂಗಿಯಾಗಿ ವಾದ ಮಂಡಿಸುತ್ತಿದ್ದರು. ವೈಯಕ್ತಿಕ ಜೀವನದಲ್ಲಿ ಅಭಯನಾಥ್ ತುಂಬಾ ಸ್ನೇಹಪರ ವ್ಯಕ್ತಿ. ವಿವಿಧ ಪ್ರಕರಣಗಳಲ್ಲಿ ಅವರ ವಾದಗಳಿಂದ ಮಾತ್ರವಲ್ಲದೆ ವಕೀಲರ ಸಮಾಜದಲ್ಲಿಯೂ ಅವರು ವಕೀಲರ ಸಮಾಜದಲ್ಲಿ ಹೆಚ್ಚು ಗೌರವಾನ್ವಿತರಾಗಿದ್ದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

7 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago