Featured

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿಲ್ಲ, ಅಲ್ಲಿರುವುದು ಕೇವಲ ಕಾರಂಜಿ  : ಮಸೀದಿ ಆಡಳಿತ ಮಂಡಳಿ ಹೇಳಿಕೆ – Vishwanews24

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿಲ್ಲ, ಅಲ್ಲಿರುವುದು ಕೇವಲ ಕಾರಂಜಿ

ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯ ಸಂದರ್ಭ ಹಿಂದೂ ಪರ ವಕೀಲರು ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಿದ್ದು, ಆದರೆ ಇದನ್ನು ಮಸೀದಿಯ ಆಡಳಿತ ಮಂಡಳಿ ತಳ್ಳಿಹಾಕಿದೆ. ಕೊಳದಲ್ಲಿ ಶಿವಲಿಂಗ ಪತ್ತೆಯಾಗಿಲ್ಲ. ಅಲ್ಲಿರುವುದು ಕೇವಲ ಕಾರಂಜಿ ( ಫೌಂಟನ್‌) ಇದನ್ನೇ ಅವರು ಶಿವಲಿಂಗ ಎಂದು ಅಂದುಕೊಂಡಿದ್ದಾರೆ ಎಂದು ಹೇಳಿದೆ. ಹಾಗೆಯೇ, ಕೊಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ್ದನ್ನು ವಿರೋಧಿಸಿದ್ದಾರೆ.

ಇನ್ನೊಂದೆಡೆ ಇದು ಕಾರಂಜಿ, ‘ಶಿವಲಿಂಗ’ ಅಲ್ಲ. ಪ್ರತಿ ಮಸೀದಿಯಲ್ಲಿ ಈ ಕಾರಂಜಿ ಇದೆ. ನ್ಯಾಯಾಲಯದ ಆಯುಕ್ತರು ಏಕೆ ಹಕ್ಕು ಮಂಡಿಸಲಿಲ್ಲ? ಸ್ಥಳವನ್ನು ಸೀಲಿಂಗ್ ಮಾಡುವ ಆದೇಶವು 1991 ರ ಕಾಯಿದೆಯ ಉಲ್ಲಂಘನೆಯಾಗಿದೆ” ಎಂದು ಎಐಎಂಐಎಂ ಮುಖ್ಯಸ್ಥ ಎ ಒವೈಸಿ ಹೇಳಿದ್ದಾರೆ.

ಮೂರು ದಿನಗಳ ಜ್ಞಾನವಾಪಿ ಮಸೀದಿ ಸಮೀಕ್ಷೆ ಸೋಮವಾರ ಮುಕ್ತಾಯಗೊಂಡ ನಂತರ, ಹಿಂದೂ ಪರ ವಕೀಲರು ಮಸೀದಿ ಸಂಕೀರ್ಣದ ವಝುಖಾನಾ ಅಥವಾ ಜಲಾಶಯದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಿದ್ದು ಈ ಕೊಳಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮಸೀದಿ ಒಳಗಡೆ ಶಿವಲಿಂಗ ಪತ್ತೆಯಾಗಿದೆ ಎಂಬ ವಕೀಲರ ಹೇಳಿಕೆ ದೇಶಾದದ್ಯಾಂತ ಸಂಚಲನಕ್ಕೆ ಕಾರಣವಾಗಿದೆ.

ಬಾಬರಿ ಮಸೀದಿಯ ನಂತರ ಮುಸ್ಲಿಮರು ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ಸಿದ್ಧರಿಲ್ಲ ಎಂದು ಓವೈಸಿ ಹೇಳಿದ್ದಾರೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, “ನೀವು ಎಷ್ಟೇ ಸತ್ಯವನ್ನು ಮುಚ್ಚಿಟ್ಟರೂ ಮುಂದೊಂದು ದಿನ ಅದು ಹೊರಬರುತ್ತದೆ, ಸತ್ಯ ಹಿ ಶಿವ ಹೈ” ಎಂದು ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

8 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

8 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

8 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

8 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

8 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

9 hours ago