Featured

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿಲ್ಲ, ಅಲ್ಲಿರುವುದು ಕೇವಲ ಕಾರಂಜಿ  : ಮಸೀದಿ ಆಡಳಿತ ಮಂಡಳಿ ಹೇಳಿಕೆ – Vishwanews24

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿಲ್ಲ, ಅಲ್ಲಿರುವುದು ಕೇವಲ ಕಾರಂಜಿ

ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯ ಸಂದರ್ಭ ಹಿಂದೂ ಪರ ವಕೀಲರು ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಿದ್ದು, ಆದರೆ ಇದನ್ನು ಮಸೀದಿಯ ಆಡಳಿತ ಮಂಡಳಿ ತಳ್ಳಿಹಾಕಿದೆ. ಕೊಳದಲ್ಲಿ ಶಿವಲಿಂಗ ಪತ್ತೆಯಾಗಿಲ್ಲ. ಅಲ್ಲಿರುವುದು ಕೇವಲ ಕಾರಂಜಿ ( ಫೌಂಟನ್‌) ಇದನ್ನೇ ಅವರು ಶಿವಲಿಂಗ ಎಂದು ಅಂದುಕೊಂಡಿದ್ದಾರೆ ಎಂದು ಹೇಳಿದೆ. ಹಾಗೆಯೇ, ಕೊಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ್ದನ್ನು ವಿರೋಧಿಸಿದ್ದಾರೆ.

ಇನ್ನೊಂದೆಡೆ ಇದು ಕಾರಂಜಿ, ‘ಶಿವಲಿಂಗ’ ಅಲ್ಲ. ಪ್ರತಿ ಮಸೀದಿಯಲ್ಲಿ ಈ ಕಾರಂಜಿ ಇದೆ. ನ್ಯಾಯಾಲಯದ ಆಯುಕ್ತರು ಏಕೆ ಹಕ್ಕು ಮಂಡಿಸಲಿಲ್ಲ? ಸ್ಥಳವನ್ನು ಸೀಲಿಂಗ್ ಮಾಡುವ ಆದೇಶವು 1991 ರ ಕಾಯಿದೆಯ ಉಲ್ಲಂಘನೆಯಾಗಿದೆ” ಎಂದು ಎಐಎಂಐಎಂ ಮುಖ್ಯಸ್ಥ ಎ ಒವೈಸಿ ಹೇಳಿದ್ದಾರೆ.

ಮೂರು ದಿನಗಳ ಜ್ಞಾನವಾಪಿ ಮಸೀದಿ ಸಮೀಕ್ಷೆ ಸೋಮವಾರ ಮುಕ್ತಾಯಗೊಂಡ ನಂತರ, ಹಿಂದೂ ಪರ ವಕೀಲರು ಮಸೀದಿ ಸಂಕೀರ್ಣದ ವಝುಖಾನಾ ಅಥವಾ ಜಲಾಶಯದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಿದ್ದು ಈ ಕೊಳಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮಸೀದಿ ಒಳಗಡೆ ಶಿವಲಿಂಗ ಪತ್ತೆಯಾಗಿದೆ ಎಂಬ ವಕೀಲರ ಹೇಳಿಕೆ ದೇಶಾದದ್ಯಾಂತ ಸಂಚಲನಕ್ಕೆ ಕಾರಣವಾಗಿದೆ.

ಬಾಬರಿ ಮಸೀದಿಯ ನಂತರ ಮುಸ್ಲಿಮರು ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ಸಿದ್ಧರಿಲ್ಲ ಎಂದು ಓವೈಸಿ ಹೇಳಿದ್ದಾರೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, “ನೀವು ಎಷ್ಟೇ ಸತ್ಯವನ್ನು ಮುಚ್ಚಿಟ್ಟರೂ ಮುಂದೊಂದು ದಿನ ಅದು ಹೊರಬರುತ್ತದೆ, ಸತ್ಯ ಹಿ ಶಿವ ಹೈ” ಎಂದು ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

18 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

19 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

19 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

19 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

21 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

22 hours ago