Featured

ಜ.11 ರಂದು ಉಡುಪಿ ಜಿಲ್ಲಾಡಳಿತ ವತಿಯಿಂದ ‘ಉಡುಪಿ ಫುಲ್ ಮ್ಯಾರಥಾನ್’ – vishwanews24

ಜ.11 ರಂದು ಉಡುಪಿ ಜಿಲ್ಲಾಡಳಿತ ವತಿಯಿಂದ ‘ಉಡುಪಿ ಫುಲ್ ಮ್ಯಾರಥಾನ್’

ಮಣಿಪಾಲ: ಉಡುಪಿ ಜಿಲ್ಲಾಡಳಿತ ಇದೇ ಮೊದಲ ಬಾರಿ ಮ್ಯಾರಥಾನ್ ಸ್ಪರ್ಧೆಯನ್ನು ಸಂಘಟಿಸಲು ಮುಂದಾಗಿದ್ದು, ಇದು ಮುಂದೆ ಪ್ರತಿವರ್ಷ ನಿರ್ದಿಷ್ಟ ದಿನದಂದು ನಡೆಯುವಂತೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಬೆಂಗಳೂರಿನ ಕ್ರೀಡಾ ಸಂಘಟಕ ಸಂಸ್ಥೆ ಎನ್ಇಬಿಯ ಸಹಯೋಗದೊಂದಿಗೆ ಈ ಫುಲ್ ಮ್ಯಾರಥಾನ್ ಮುಂದಿನ ವರ್ಷದ ಜನವರಿ 11ರ ರವಿವಾರ ನಡೆಯಲಿದೆ. ಮುಂದೆ ಪ್ರತಿವರ್ಷ ಜನವರಿ ತಿಂಗಳ ಎರಡನೇ ರವಿವಾರದಂದು ಇದು ನಡೆಯಲಿದೆ ಎಂದವರು ಅವರು ಹೇಳಿದರು.

‘ಉಡುಪಿ ಫುಲ್ ಮ್ಯಾರಥಾನ್’ ಎಂದು ಕರೆಯಲಾಗುವ ಈ ಸ್ಪರ್ಧೆಯಲ್ಲಿ 42.195ಕಿ.ಮೀ.ನ ಫುಲ್ ಮ್ಯಾರಥಾನ್, 21.097 ಕಿ.ಮೀ.ನ ಹಾಫ್ ಮ್ಯಾರಥಾನ್, 10ಕಿ.ಮೀ. ಹಾಗೂ 5ಕಿ.ಮೀ.ನ ಮ್ಯಾರಥಾನ್ ಸ್ಪರ್ಧೆಗಳು ನಡೆಯಲಿದ್ದು, ಎಲ್ಲಾ ವಯೋಮಾನದ, ದೈಹಿಕವಾಗಿ ಸಮರ್ಥರಿರುವ ಪ್ರತಿಯೊಬ್ಬರು ಇದರಲ್ಲಿ ಭಾಗವಹಿಸಬಹುದು ಎಂದರು.

ಜಿಲ್ಲಾಡಳಿತದ ವತಿಯಿಂದ ಈ ಮ್ಯಾರಥಾನ್ ನಡೆಯಲಿದೆ. ದೇಶದ ಪ್ರಮುಖ ಕ್ರೀಡಾ ಸಂಘಟಕ ಸಂಸ್ಥೆ ಎನ್ಇಬಿ ಸ್ಪೋರ್ಟ್ಸ್ ಸ್ಪರ್ಧೆಯನ್ನು ಸಂಘಟಿಸಲಿದೆ ಎಂದ ಜಿಲ್ಲಾದಿಕಾರಿಗಳು, ಉಡುಪಿ ಫುಲ್ ಮ್ಯಾರಥಾನ್ನ ಲೋಗೊವನ್ನು ಬಿಡುಗಡೆಗೊಳಿಸಿದರು.

ಎನ್ಇಬಿಯ ಸ್ಪರ್ಧಾ ನಿರ್ದೇಶಕ ನಾಗರಾಜ್ ಅಡಿಗ ಮಾತನಾಡಿ, ತಮ್ಮ ಸಂಸ್ಥೆ ದೇಶದ 22 ನಗರಗಳಲ್ಲಿ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿ ಸುತ್ತಿದೆ. ತನ್ನ ಹುಟ್ಟೂರಿನಲ್ಲಿ ಇದೇ ಮೊದಲ ಬಾರಿ ಸ್ಪರ್ಧೆಯನ್ನು ಸಂಘಟಿಸುವ ಅವಕಾಶ ಸಿಕ್ಕಿದೆ ಎಂದರಲ್ಲದೇ ಮೊದಲ ವರ್ಷದ ಮ್ಯಾರಥಾನ್ನಲ್ಲಿ 6ರಿಂದ 7ಸಾವಿರ ಮಂದಿ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಮುಂದಿನ ವರ್ಷಗಳಲ್ಲಿ ಕನಿಷ್ಠ 10ಸಾವಿರ ಮಂದಿ ಪಾಲ್ಗೊಳ್ಳುವಂತೆ ನೋಡಲಾಗುವುದು. ತಮ್ಮ ಸಂಸ್ಥೆ ಈ ಮ್ಯಾರಥಾನ್ನ್ನು ಸಂಪೂರ್ಣವಾಗಿ ವೃತ್ತಿಪರವಾಗಿ ಸಂಘಟಿಸಲಿದೆ ಎಂದರು.

ಮುಂದಿನ ಜ.11ರಂದು ನಡೆಯುವ ಮೊದಲ ಫುಲ್ ಮ್ಯಾರಥಾನ್ನಲ್ಲಿ ಒಟ್ಟು 10 ಲಕ್ಷ ರೂ. ಬಹುಮಾನವಿದ್ದು, ಹೊಸ ರಾಷ್ಟ್ರೀಯ ದಾಖಲೆಯನ್ನು ಬರೆಯುವ ಪುರುಷ ಅಥವಾ ಮಹಿಳಾ ಮ್ಯಾರಥಾನ್ಪಟುವಿಗೆ 2.5 ಲಕ್ಷ ರೂ. ಬಂಪರ್ ಬಹುಮಾನ ಮೊತ್ತವನ್ನು ನೀಡಲಾಗುವುದು ಎಂದರು.

ಮ್ಯಾರಥಾನ್ನಲ್ಲಿ ಮುಕ್ತ, 18ರಿಂದ 35ವರ್ಷ, 35ರಿಂದ 45ವರ್ಷ, 45ರಿಂದ 55ವರ್ಷ ಹಾಗೂ 55+ ವರ್ಷದವರಿಗೆ ಪ್ರತ್ಯೇಕ ವಿಭಾಗಗಳಿವೆ. ಫುಲ್ ಮ್ಯಾರಥಾನ್ ಗೆಲ್ಲುವ ಪುರುಷ ಮತ್ತು ಮಹಿಳಾ ಅತ್ಲೀಟ್ಗೆ 20,000 ರೂ.ನಗದು ಬಹುಮಾನವಿದೆ. ಹಾಫ್ ಮ್ಯಾರಥಾನ್ ವಿಜೇತರಿಗೆ 10ಸಾವಿರ ಹಾಗೂ 10ಕಿ.ಮೀ. ವಿಜೇತರಿಗೆ 5,000ರೂ. ನಗದು ಬಹುಮಾನವಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಎಡಿಸಿ ಅಬಿದ್ ಗದ್ಯಾಳ್, ಉಡುಪಿ ಜಿಲ್ಲಾ ಅಮೆಚೂರ್ ಅತ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಜಿಲ್ಲಾ ಕ್ರೀಡಾಧಿಕಾರಿ ಡಾ.ರೋಶನ್ಕುಮಾರ್ ಶೆಟ್ಟಿ ಮುಂತಾದವರಿದ್ದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago