Featured

ಜ.14ರಿಂದ ಕಟೀಲು ಮೇಳದ ಯಕ್ಷಗಾನ ಇನ್ನು ರಾತ್ರಿಯಿಡಿ ಪ್ರದರ್ಶನ..vishwanews24

ಜ.14ರಿಂದ ಕಟೀಲು ಮೇಳದ ಯಕ್ಷಗಾನ ಇನ್ನು ರಾತ್ರಿಯಿಡಿ ಪ್ರದರ್ಶನ..

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಯಕ್ಷಗಾನ ಜ.14ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ರಾತ್ರಿಯಿಡಿ ಪ್ರದರ್ಶನ ಕಾಣಲಿದೆ.

ಕರ್ನಾಟಕ ಹೈ ಕೋರ್ಟ್ ಇದಕ್ಕೆ ಅನುಮತಿ ನೀಡಿದೆ, ಶಬ್ದಮಾಲಿನ್ಯ ಮಿತಿಯ ನಿಯಮದಿಂದಾಗಿ ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಈ ಬಾರಿಯೂ ಸುಮಾರು ಒಂದೂವರೆ ತಿಂಗಳ ಕಾಲ ಕಾಲಮಿತಿಯಲ್ಲಿ ಪ್ರದರ್ಶನ ನೀಡಿದೆ. ಹೈಕೋರ್ಟ್‌ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ ಅಪೇಕ್ಷೆ ಮೇರೆಗೆ ಜ.14ರ ಮಕರ ಸಂಕ್ರಮಣದಿಂದ ಬೆಳಗ್ಗಿನವರೆಗೆ ಯಕ್ಷಗಾನ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ಆನುವಂಶಿಕ ಮುಕ್ತೇಸರ ಕೊಡೆತ್ತೂರುಗುತ್ತು ಸನತ್‌ ಕುಮಾರ್‌ ಶೆಟ್ಟಿ ಹಾಗೂ ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.

ಬೆಂಗಳೂರಿನ ಕೃಷ್ಣಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್‌, ಪೂರ್ಣರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ತೊಂದರೆ ಇಲ್ಲ, ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದಿತ್ತು. ಶಬ್ದಮಾಲಿನ್ಯ ಉಂಟಾಗಲಾರದು, ಧ್ವನಿವರ್ಧಕ ಬಳಕೆಯಿಂದ ಹಳ್ಳಿಗಳಲ್ಲಿ ಯಾವುದೇ ಸಮಸ್ಯೆ ಇಲ್ಲ, ನಗರದಲ್ಲಿ ಅದರ ಶಬ್ದಮಿತಿಯನ್ನು ನೋಡಿಕೊಳ್ಳಲಾಗುವುದು, ಇದು ಹರಕೆಯ ಆಟವಾದ್ದರಿಂದ ಜನರಿಗೆ ಯಾವುದೇ ಸಮಸ್ಯೆಯೂ ಆಗಲಾರದು ಎಂದು ನ್ಯಾಯಾಲಯದಲ್ಲಿ ವಾದಿಸಲಾಗಿತ್ತು. ಈ ವಾದವನ್ನು ಒಪ್ಪಿಕೊಂಡಿರುವ ನ್ಯಾಯಾಲಯ ಆರೂ ಮೇಳಗಳ ಆಟವನ್ನು ಪೂರ್ಣ ರಾತ್ರಿ ನಡೆಸಲು ಅನುಮತಿ ನೀಡಿದೆ.

Vishwa News 24

Recent Posts

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

7 minutes ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

31 minutes ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

37 minutes ago

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ  ಪ್ರಧಾನಿ…

3 hours ago

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ – vishwanews24

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…

3 hours ago

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  – vishwanews24

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…

3 hours ago