ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಯಕ್ಷಗಾನ ಜ.14ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ರಾತ್ರಿಯಿಡಿ ಪ್ರದರ್ಶನ ಕಾಣಲಿದೆ.
ಕರ್ನಾಟಕ ಹೈ ಕೋರ್ಟ್ ಇದಕ್ಕೆ ಅನುಮತಿ ನೀಡಿದೆ, ಶಬ್ದಮಾಲಿನ್ಯ ಮಿತಿಯ ನಿಯಮದಿಂದಾಗಿ ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಈ ಬಾರಿಯೂ ಸುಮಾರು ಒಂದೂವರೆ ತಿಂಗಳ ಕಾಲ ಕಾಲಮಿತಿಯಲ್ಲಿ ಪ್ರದರ್ಶನ ನೀಡಿದೆ. ಹೈಕೋರ್ಟ್ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ ಅಪೇಕ್ಷೆ ಮೇರೆಗೆ ಜ.14ರ ಮಕರ ಸಂಕ್ರಮಣದಿಂದ ಬೆಳಗ್ಗಿನವರೆಗೆ ಯಕ್ಷಗಾನ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ಆನುವಂಶಿಕ ಮುಕ್ತೇಸರ ಕೊಡೆತ್ತೂರುಗುತ್ತು ಸನತ್ ಕುಮಾರ್ ಶೆಟ್ಟಿ ಹಾಗೂ ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.
ಬೆಂಗಳೂರಿನ ಕೃಷ್ಣಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್, ಪೂರ್ಣರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ತೊಂದರೆ ಇಲ್ಲ, ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದಿತ್ತು. ಶಬ್ದಮಾಲಿನ್ಯ ಉಂಟಾಗಲಾರದು, ಧ್ವನಿವರ್ಧಕ ಬಳಕೆಯಿಂದ ಹಳ್ಳಿಗಳಲ್ಲಿ ಯಾವುದೇ ಸಮಸ್ಯೆ ಇಲ್ಲ, ನಗರದಲ್ಲಿ ಅದರ ಶಬ್ದಮಿತಿಯನ್ನು ನೋಡಿಕೊಳ್ಳಲಾಗುವುದು, ಇದು ಹರಕೆಯ ಆಟವಾದ್ದರಿಂದ ಜನರಿಗೆ ಯಾವುದೇ ಸಮಸ್ಯೆಯೂ ಆಗಲಾರದು ಎಂದು ನ್ಯಾಯಾಲಯದಲ್ಲಿ ವಾದಿಸಲಾಗಿತ್ತು. ಈ ವಾದವನ್ನು ಒಪ್ಪಿಕೊಂಡಿರುವ ನ್ಯಾಯಾಲಯ ಆರೂ ಮೇಳಗಳ ಆಟವನ್ನು ಪೂರ್ಣ ರಾತ್ರಿ ನಡೆಸಲು ಅನುಮತಿ ನೀಡಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…