ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ಜ. 22 ರಂದು ಉದ್ಘಾಟನೆಯಾಗಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಏರ್ ಇಂಡಿಯಾ ಎಕ್ಸಪ್ರೆಸ್ ಜ. 17ರಿಂದ ಬೆಂಗಳೂರು ಮತ್ತು ಕೋಲ್ಕತದಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ.
ಬೆಂಗಳೂರು-ಅಯೋಧ್ಯೆ ಮಾರ್ಗದ ಮೊದಲ ವಿಮಾನವು ಜ. 17 ರಂದು ಬೆಳಿಗ್ಗೆ 8.05 ಕ್ಕೆ ಹೊರಟು 10.35 ಕ್ಕೆ ಅಯೋಧ್ಯೆಯನ್ನು ತಲುಪಲಿದೆ. ಅದೇ ರೀತಿ ಹಿಂತಿರುಗುವ ವಿಮಾನವು ಅಯೋಧ್ಯೆಯಿಂದ ಮಧ್ಯಾಹ್ನ 3.40 ಕ್ಕೆ ಹೊರಡಲಿದ್ದು, ಸಂಜೆ 6.10 ಕ್ಕೆ ಬೆಂಗಳೂರಿಗೆ ತಲುಪಲಿದೆ ಎಂದು ತಿಳಿದು ಬಂದಿದೆ.
ಅದೇ ರೀತಿ ಅಯೋಧ್ಯೆ-ಕೋಲ್ಕತ್ತಾ ಮಾರ್ಗದ ವಿಮಾನವು ಅಯೋಧ್ಯೆಯಿಂದ ಬೆಳಿಗ್ಗೆ 11.05 ಕ್ಕೆ ಹೊರಡಲಿದ್ದು, ಮಧ್ಯಾಹ್ನ 12.50 ಕ್ಕೆ ಕೋಲ್ಕತ್ತಾದಲ್ಲಿ ಲ್ಯಾಂಡ್ ಆಗಲಿದೆ. ಕೋಲ್ಕತ್ತಾ-ಅಯೋಧ್ಯೆ ವಿಮಾನವು ಕೋಲ್ಕತ್ತಾದಿಂದ ಮಧ್ಯಾಹ್ನ 1:25 ಕ್ಕೆ ಹೊರಡಲಿದ್ದು, ಮಧ್ಯಾಹ್ನ 3.10 ಕ್ಕೆ ಅಯೋಧ್ಯೆಯನ್ನು ತಲುಪಲಿದೆ.
ಇನ್ನು ಅಯೋಧ್ಯೆ, ಬೆಂಗಳೂರು, ಕೋಲ್ಕತ್ತ ನಡುವೆ ವಾರಕ್ಕೆ ಮೂರು ತಡೆರಹಿತ, ನೇರ ವಿಮಾನ ಯಾನ ಇರಲಿದೆ. ಇದರ ವೇಳಾಪಟ್ಟಿ ಮತ್ತು ಬುಕ್ಕಿಂಗ್ ವ್ಯವಸ್ಥೆ ಏರ್ ಇಂಡಿಯಾ ಎಕ್ಸ್ಪ್ರೆಸ್ನ ವೆಬ್ಸೈಟ್ (airindiaexpress.com), ಆಪ್ಗಳಲ್ಲಿ ಲಭ್ಯವಿದೆ ಎಂದು ಕಂಪನಿ ಶುಕ್ರವಾರ ಪ್ರಕಟನೆಯಲ್ಲಿ ತಿಳಿಸಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…