Featured

ಜ. 17ರಿಂದ ಬೆಂಗಳೂರು – ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಆರಂಭ – vishwanews24

ಜ. 17ರಿಂದ ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಆರಂಭ

ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ಜ. 22 ರಂದು ಉದ್ಘಾಟನೆಯಾಗಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಏರ್​ ಇಂಡಿಯಾ ಎಕ್ಸಪ್ರೆಸ್ ​ ಜ. 17ರಿಂದ ಬೆಂಗಳೂರು ಮತ್ತು ಕೋಲ್ಕತದಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ.

ಬೆಂಗಳೂರು-ಅಯೋಧ್ಯೆ ಮಾರ್ಗದ ಮೊದಲ ವಿಮಾನವು ಜ. 17 ರಂದು ಬೆಳಿಗ್ಗೆ 8.05 ಕ್ಕೆ ಹೊರಟು 10.35 ಕ್ಕೆ ಅಯೋಧ್ಯೆಯನ್ನು ತಲುಪಲಿದೆ. ಅದೇ ರೀತಿ ಹಿಂತಿರುಗುವ ವಿಮಾನವು ಅಯೋಧ್ಯೆಯಿಂದ ಮಧ್ಯಾಹ್ನ 3.40 ಕ್ಕೆ ಹೊರಡಲಿದ್ದು, ಸಂಜೆ 6.10 ಕ್ಕೆ ಬೆಂಗಳೂರಿಗೆ ತಲುಪಲಿದೆ ಎಂದು ತಿಳಿದು ಬಂದಿದೆ.

ಅದೇ ರೀತಿ ಅಯೋಧ್ಯೆ-ಕೋಲ್ಕತ್ತಾ ಮಾರ್ಗದ ವಿಮಾನವು ಅಯೋಧ್ಯೆಯಿಂದ ಬೆಳಿಗ್ಗೆ 11.05 ಕ್ಕೆ ಹೊರಡಲಿದ್ದು, ಮಧ್ಯಾಹ್ನ 12.50 ಕ್ಕೆ ಕೋಲ್ಕತ್ತಾದಲ್ಲಿ ಲ್ಯಾಂಡ್​ ಆಗಲಿದೆ. ಕೋಲ್ಕತ್ತಾ-ಅಯೋಧ್ಯೆ ವಿಮಾನವು ಕೋಲ್ಕತ್ತಾದಿಂದ ಮಧ್ಯಾಹ್ನ 1:25 ಕ್ಕೆ ಹೊರಡಲಿದ್ದು, ಮಧ್ಯಾಹ್ನ 3.10 ಕ್ಕೆ ಅಯೋಧ್ಯೆಯನ್ನು ತಲುಪಲಿದೆ.

ಇನ್ನು ಅಯೋಧ್ಯೆ, ಬೆಂಗಳೂರು, ಕೋಲ್ಕತ್ತ ನಡುವೆ ವಾರಕ್ಕೆ ಮೂರು ತಡೆರಹಿತ, ನೇರ ವಿಮಾನ ಯಾನ ಇರಲಿದೆ. ಇದರ ವೇಳಾಪಟ್ಟಿ ಮತ್ತು ಬುಕ್ಕಿಂಗ್ ವ್ಯವಸ್ಥೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ವೆಬ್‌ಸೈಟ್ (airindiaexpress.com), ಆಪ್‌ಗಳಲ್ಲಿ ಲಭ್ಯವಿದೆ ಎಂದು ಕಂಪನಿ ಶುಕ್ರವಾರ ಪ್ರಕಟನೆಯಲ್ಲಿ ತಿಳಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 day ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago