Featured

ಜ. 21ರಿಂದ ಮಂಗಳೂರು ಸಿಂಗಾಪುರ ಮಧ್ಯೆ ನೇರ ವಿಮಾನ ಸಂಚಾರ.. vishwanews24

ಮಂಗಳೂರು – ದೆಹಲಿ ಮಧ್ಯೆ ಪ್ರತಿ ದಿನ ನೇರ ವಿಮಾನ ಇಲ್ಲಿದೆ ವೇಳಾಪಟ್ಟಿ

ಮಂಗಳೂರು ಪುಣೆ ನೇರ ವಿಮಾನ ಇಲ್ಲಿದೆ ವೇಳಾಪಟ್ಟಿ

ಸರ್ಕಾರಕ್ಕೆ ಮನವಿ ಮಾಡಿದ್ದ ಸಂಸದ ಬ್ರಿಜೇಶ್ ಚೌಟ

ಮಂಗಳೂರು: ಮಂಗಳೂರು ಮತ್ತು ಸಿಂಗಾಪುರ ನಡುವೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ 21 ರಿಂದ ವಾರಕ್ಕೆ ಎರಡು ಬಾರಿ ವಿಮಾನ ಸಂಚಾರ ಆರಂಭಿಸಲಿದೆ. ಇದರೊಂದಿಗೆ ಮಂಗಳೂರಿನೊಂದಿಗೆ ವಿಮಾನ ಸಂಪರ್ಕವನ್ನು ಪಡೆಯುವ ಆಗ್ನೇಯ ಏಷ್ಯಾದ ಮೊದಲ ಅಂತರರಾಷ್ಟ್ರೀಯ ತಾಣವಾಗಿ ಸಿಂಗಾಪುರ ಗುರುತಿಸಿಕೊಳ್ಳಲಿದೆ. ಈವರೆಗೆ, ಮಂಗಳೂರಿನಿಂದ ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳು ಮಧ್ಯಪ್ರಾಚ್ಯ ದೇಶಗಳಿಗೆ ಮಾತ್ರ ಕಾರ್ಯಾಚರಿಸುತ್ತಿವೆ.

ಮಂಗಳವಾರ ಮತ್ತು ಶುಕ್ರವಾರದಂದು ಉಭಯ ನಿಲ್ದಾಣಗಳ ನಡುವೆ ವಿಮಾನಗಳು ಸಂಚಾರ ಮಾಡಲಿವೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಪ್ರಕಟಣೆ ತಿಳಿಸಿದೆ.

ಮಂಗಳೂರು ಸಿಂಗಾಪುರ ವಿಮಾನದ ಸಮಯ
ವಿಮಾನ ಸಂಖ್ಯೆ IX 0862 ಮಂಗಳೂರಿನಿಂದ 5.55 ಗಂಟೆಗೆ ಹೊರಟು 13.25 ಗಂಟೆಗೆ ಸಿಂಗಾಪುರ ತಲುಪಲಿದೆ. ವಿಮಾನ ಸಂಖ್ಯೆ IX 0861 ಸಿಂಗಾಪುರದಿಂದ 14.25 ಗಂಟೆಗೆ ಹೊರಟು 16.55 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ.

ಮಂಗಳೂರು ದೆಹಲಿ ಮಧ್ಯೆ ಪ್ರತಿ ದಿನ ನೇರ ವಿಮಾನ
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 1 ರಿಂದ ಮಂಗಳೂರು ಮತ್ತು ದೆಹಲಿ ನಡುವೆ ಪ್ರತಿ ದಿನ ನೇರ ವಿಮಾನಯಾನ ಸೇವೆ ಒದಗಿಸಲಿದೆ. ವಿಮಾನ ಸಂಖ್ಯೆ IX 1552 ಮಂಗಳೂರಿನಿಂದ 6.40 ಗಂಟೆಗೆ ಹೊರಟು 9.35 ಗಂಟೆಗೆ ದೆಹಲಿಗೆ ತಲುಪಲಿದೆ. ವಿಮಾನ ಸಂಖ್ಯೆ IX 2768 ದೆಹಲಿಯಿಂದ 6.40 ಗಂಟೆಗೆ ಹೊರಟು ಮಂಗಳೂರಿಗೆ 9.35 ಗಂಟೆಗೆ ತಲುಪಲಿದೆ.

ಮಂಗಳೂರು ಪುಣೆ ನೇರ ವಿಮಾನ ವೇಳಾಪಟ್ಟಿ
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ 4 ರಿಂದ ಮಂಗಳೂರು ಮತ್ತು ಪುಣೆ ನಡುವೆ ಎರಡು ನೇರ ವಿಮಾನಗಳನ್ನು ನಿರ್ವಹಿಸಲಿದೆ. ವಿಮಾನ ಸಂಖ್ಯೆ IX 2256 ಪುಣೆಯಿಂದ 8 ಗಂಟೆಗೆ ಹೊರಟು 9.25 ಗಂಟೆಗೆ ಪುಣೆಗೆ ತಲುಪುತ್ತದೆ. ವಿಮಾನ ಸಂಖ್ಯೆ 2257 ಪುಣೆಯಿಂದ 9.55 ಗಂಟೆಗೆ ಹೊರಟು 11.40 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ. ವಿಮಾನ ಸಂಖ್ಯೆ 2236 ಮಂಗಳೂರಿನಿಂದ 18.30 ಗಂಟೆಗೆ ಹೊರಟು 20.00 ಗಂಟೆಗೆ ಪುಣೆಗೆ ಮತ್ತು ವಿಮಾನ ಸಂಖ್ಯೆ 2237 ಪುಣೆಯಿಂದ 20.35 ಗಂಟೆಗೆ ಹೊರಟು 22.05 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ.

ಮಂಗಳೂರು ಸಿಂಗಾಪುರ ಮಧ್ಯೆ ನೇರ ವಿಮಾನಯಾನ ಸಂಪರ್ಕವು ಉದ್ಯಮ ಕ್ಷೇತ್ರಕ್ಕೆ ಪೂರಕವಾಗಿರಲಿದ್ದು, ಪ್ರಯಾಣವನ್ನು ಸುಲಭಗೊಳಿಸಲಿದೆ. ಜತೆಗೆ, ಆಸಿಯಾನ್ ಮತ್ತು ಪೂರ್ವ ಏಷ್ಯಾ ರಾಷ್ಟ್ರಗಳೊಂದಿಗೆ ಭಾರತವನ್ನು ಸಂಪರ್ಕಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರದ ಆಕ್ಟ್ ಈಸ್ಟ್ ನೀತಿಗೆ ಪೂರಕವಾಗಿರಲಿದೆ ಎಂದು ಚೌಟ ಹೇಳಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

20 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

21 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

21 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

21 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago