ಮಂಗಳೂರು: ಮಂಗಳೂರು ಮತ್ತು ಸಿಂಗಾಪುರ ನಡುವೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಜನವರಿ 21 ರಿಂದ ವಾರಕ್ಕೆ ಎರಡು ಬಾರಿ ವಿಮಾನ ಸಂಚಾರ ಆರಂಭಿಸಲಿದೆ. ಇದರೊಂದಿಗೆ ಮಂಗಳೂರಿನೊಂದಿಗೆ ವಿಮಾನ ಸಂಪರ್ಕವನ್ನು ಪಡೆಯುವ ಆಗ್ನೇಯ ಏಷ್ಯಾದ ಮೊದಲ ಅಂತರರಾಷ್ಟ್ರೀಯ ತಾಣವಾಗಿ ಸಿಂಗಾಪುರ ಗುರುತಿಸಿಕೊಳ್ಳಲಿದೆ. ಈವರೆಗೆ, ಮಂಗಳೂರಿನಿಂದ ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳು ಮಧ್ಯಪ್ರಾಚ್ಯ ದೇಶಗಳಿಗೆ ಮಾತ್ರ ಕಾರ್ಯಾಚರಿಸುತ್ತಿವೆ.
ಮಂಗಳವಾರ ಮತ್ತು ಶುಕ್ರವಾರದಂದು ಉಭಯ ನಿಲ್ದಾಣಗಳ ನಡುವೆ ವಿಮಾನಗಳು ಸಂಚಾರ ಮಾಡಲಿವೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ನ ಪ್ರಕಟಣೆ ತಿಳಿಸಿದೆ.
ಮಂಗಳೂರು ಸಿಂಗಾಪುರ ವಿಮಾನದ ಸಮಯ
ವಿಮಾನ ಸಂಖ್ಯೆ IX 0862 ಮಂಗಳೂರಿನಿಂದ 5.55 ಗಂಟೆಗೆ ಹೊರಟು 13.25 ಗಂಟೆಗೆ ಸಿಂಗಾಪುರ ತಲುಪಲಿದೆ. ವಿಮಾನ ಸಂಖ್ಯೆ IX 0861 ಸಿಂಗಾಪುರದಿಂದ 14.25 ಗಂಟೆಗೆ ಹೊರಟು 16.55 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ.
ಮಂಗಳೂರು ದೆಹಲಿ ಮಧ್ಯೆ ಪ್ರತಿ ದಿನ ನೇರ ವಿಮಾನ
ಏರ್ ಇಂಡಿಯಾ ಎಕ್ಸ್ಪ್ರೆಸ್ ಫೆಬ್ರವರಿ 1 ರಿಂದ ಮಂಗಳೂರು ಮತ್ತು ದೆಹಲಿ ನಡುವೆ ಪ್ರತಿ ದಿನ ನೇರ ವಿಮಾನಯಾನ ಸೇವೆ ಒದಗಿಸಲಿದೆ. ವಿಮಾನ ಸಂಖ್ಯೆ IX 1552 ಮಂಗಳೂರಿನಿಂದ 6.40 ಗಂಟೆಗೆ ಹೊರಟು 9.35 ಗಂಟೆಗೆ ದೆಹಲಿಗೆ ತಲುಪಲಿದೆ. ವಿಮಾನ ಸಂಖ್ಯೆ IX 2768 ದೆಹಲಿಯಿಂದ 6.40 ಗಂಟೆಗೆ ಹೊರಟು ಮಂಗಳೂರಿಗೆ 9.35 ಗಂಟೆಗೆ ತಲುಪಲಿದೆ.
ಮಂಗಳೂರು ಪುಣೆ ನೇರ ವಿಮಾನ ವೇಳಾಪಟ್ಟಿ
ಏರ್ ಇಂಡಿಯಾ ಎಕ್ಸ್ಪ್ರೆಸ್ ಜನವರಿ 4 ರಿಂದ ಮಂಗಳೂರು ಮತ್ತು ಪುಣೆ ನಡುವೆ ಎರಡು ನೇರ ವಿಮಾನಗಳನ್ನು ನಿರ್ವಹಿಸಲಿದೆ. ವಿಮಾನ ಸಂಖ್ಯೆ IX 2256 ಪುಣೆಯಿಂದ 8 ಗಂಟೆಗೆ ಹೊರಟು 9.25 ಗಂಟೆಗೆ ಪುಣೆಗೆ ತಲುಪುತ್ತದೆ. ವಿಮಾನ ಸಂಖ್ಯೆ 2257 ಪುಣೆಯಿಂದ 9.55 ಗಂಟೆಗೆ ಹೊರಟು 11.40 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ. ವಿಮಾನ ಸಂಖ್ಯೆ 2236 ಮಂಗಳೂರಿನಿಂದ 18.30 ಗಂಟೆಗೆ ಹೊರಟು 20.00 ಗಂಟೆಗೆ ಪುಣೆಗೆ ಮತ್ತು ವಿಮಾನ ಸಂಖ್ಯೆ 2237 ಪುಣೆಯಿಂದ 20.35 ಗಂಟೆಗೆ ಹೊರಟು 22.05 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ.
ಮಂಗಳೂರು ಸಿಂಗಾಪುರ ಮಧ್ಯೆ ನೇರ ವಿಮಾನಯಾನ ಸಂಪರ್ಕವು ಉದ್ಯಮ ಕ್ಷೇತ್ರಕ್ಕೆ ಪೂರಕವಾಗಿರಲಿದ್ದು, ಪ್ರಯಾಣವನ್ನು ಸುಲಭಗೊಳಿಸಲಿದೆ. ಜತೆಗೆ, ಆಸಿಯಾನ್ ಮತ್ತು ಪೂರ್ವ ಏಷ್ಯಾ ರಾಷ್ಟ್ರಗಳೊಂದಿಗೆ ಭಾರತವನ್ನು ಸಂಪರ್ಕಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರದ ಆಕ್ಟ್ ಈಸ್ಟ್ ನೀತಿಗೆ ಪೂರಕವಾಗಿರಲಿದೆ ಎಂದು ಚೌಟ ಹೇಳಿದ್ದಾರೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…