Featured

ಜ.29 ರಿಂದ ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ

ಜ.29 ರಿಂದ ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ  ರಾಯಭಾರಿಯಾಗಿ ನಟ ಪ್ರಕಾಶ್ ರಾಜ್  ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ  ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡ್ತೀನಿ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಮಿತಿ ನಿರ್ಧರಿಸಿದಂತೆ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಈ ವರ್ಷ ಆಸ್ಕರ್ ಪ್ರಶಸ್ತಿಗಳಿಗೆ ಶಾರ್ಟ್ ಲಿಸ್ಟ್ ಆಗಿರೋ ಚಿತ್ರಗಳು ಪ್ರದರ್ಶನ ಆಗಲಿವೆ. ಜೊತೆಗೆ ಇತ್ತೀಚಿಗೆ ಅಗಲಿದ ನಟ ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು, ಇನ್ನಿತರ ಗಣ್ಯರ ಸ್ಮರಣಾರ್ಥ ಶ್ರದ್ಧಾಂಜಲಿ ಮತ್ತು ಸವಿನೆನಪು ವಿಭಾಗದಲ್ಲಿ ಚಲನಚಿತ್ರ ಪ್ರದರ್ಶಿಸಲಾಗುತ್ತದೆ. ಮಹಿಳೆಯರ ಸಬಲೀಕರಣದ ಥೀಮ್ ಮಾಡುವ ಯೋಚನೆ ಇದೆ. ಸಂಜೆ ಒಳಗೆ ಥೀಮ್ ಬಿಡುಗಡೆ ಮಾಡ್ತೀವಿ. ಈ ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಈ ಉತ್ಸವ ಅನುಕೂಲ ಮಾಡಿಕೊಡುತ್ತದೆ. ಲೂಲು ಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕ್ರೀನ್‌ನಲ್ಲಿ ಪ್ರದರ್ಶನ ಮಾಡಲಾಗುವುದು. ಈವರೆಗೂ 110 ಚಿತ್ರಗಳಿಂದ ಅರ್ಜಿ ಬಂದಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವಾಗಿದೆ ಎಂದಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago