Featured

ಜ.29 ರಿಂದ ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ

ಜ.29 ರಿಂದ ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ  ರಾಯಭಾರಿಯಾಗಿ ನಟ ಪ್ರಕಾಶ್ ರಾಜ್  ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ  ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡ್ತೀನಿ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಮಿತಿ ನಿರ್ಧರಿಸಿದಂತೆ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಈ ವರ್ಷ ಆಸ್ಕರ್ ಪ್ರಶಸ್ತಿಗಳಿಗೆ ಶಾರ್ಟ್ ಲಿಸ್ಟ್ ಆಗಿರೋ ಚಿತ್ರಗಳು ಪ್ರದರ್ಶನ ಆಗಲಿವೆ. ಜೊತೆಗೆ ಇತ್ತೀಚಿಗೆ ಅಗಲಿದ ನಟ ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು, ಇನ್ನಿತರ ಗಣ್ಯರ ಸ್ಮರಣಾರ್ಥ ಶ್ರದ್ಧಾಂಜಲಿ ಮತ್ತು ಸವಿನೆನಪು ವಿಭಾಗದಲ್ಲಿ ಚಲನಚಿತ್ರ ಪ್ರದರ್ಶಿಸಲಾಗುತ್ತದೆ. ಮಹಿಳೆಯರ ಸಬಲೀಕರಣದ ಥೀಮ್ ಮಾಡುವ ಯೋಚನೆ ಇದೆ. ಸಂಜೆ ಒಳಗೆ ಥೀಮ್ ಬಿಡುಗಡೆ ಮಾಡ್ತೀವಿ. ಈ ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಈ ಉತ್ಸವ ಅನುಕೂಲ ಮಾಡಿಕೊಡುತ್ತದೆ. ಲೂಲು ಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕ್ರೀನ್‌ನಲ್ಲಿ ಪ್ರದರ್ಶನ ಮಾಡಲಾಗುವುದು. ಈವರೆಗೂ 110 ಚಿತ್ರಗಳಿಂದ ಅರ್ಜಿ ಬಂದಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವಾಗಿದೆ ಎಂದಿದ್ದಾರೆ.

 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

20 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

23 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

23 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

23 hours ago