ಜ. 30ರಂದು BJP ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಗಳೂರಿಗೆ – vishwanews24
ಜ. 30ರಂದು BJP ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಗಳೂರಿಗೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ ಜನವರಿ 30 ಮಂಗಳವಾರದಂದು ಸಂಜೆ 4.30ಗಂಟೆಗೆ ನಗರದ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ.
ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸತೀಶ್ ಕುಂಪಲ ಅವರು ಪ್ರಸಕ್ತ ಬಿಜೆಪಿ ಅಧ್ಯಕ್ಷರಾದ ಸುದರ್ಶನ ಮೂಡುಬಿದಿರೆ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
ಟ್ರಾಕ್ಟರ್ ಮತ್ತು ಶಾಲಾ ಬಸ್ ನಡುವೆ ಭೀಕರ ಅಪಘಾತ ; ನಾಲ್ವರು ಮಕ್ಕಳು ದುರ್ಮರಣ – vishwanews24
ಸಮಾರಂಭಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರರವರು ಆಗಮಿಸಲಿದ್ದು, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ,ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮತ್ತು ಜಿಲ್ಲೆಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ,ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್,ಭಾಗೀರಥಿ ಮುರುಳ್ಯ,ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ,ಹರೀಶ್ ಪೂಂಜಾ, ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್, ಸಹಿತ ಬಿಜೆಪಿ ಪಕ್ಷದ ಪ್ರಮುಖರು ಸಾಕ್ಷಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸತೀಶ್ ಕುಂಪಲ ಅವರು ತಿಳಿಸಿದ್ದಾರೆ.
ವಿಜಯಪುರ : 53 ನಿಮಿಷಗಳ ಅಂತರದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ ; ಜನರಲ್ಲಿ ಆತಂಕ – vishwanews24
