ಜ.30ರಿಂದ ಮಣಿಪಾಲ-ಬೆಂಗಳೂರು ನಡುವೆ ವೋಲ್ವೋ ಸಾರಿಗೆ ಓಡಾಟ ಸೌಲಭ್ಯ ಆರಂಭ -Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಜ.30ರಿಂದ ಮಣಿಪಾಲ-ಬೆಂಗಳೂರು ನಡುವೆ ವೋಲ್ವೋ ಸಾರಿಗೆ ಓಡಾಟ ಸೌಲಭ್ಯ ಆರಂಭ -Vishwanews24

ಉಡುಪಿ: ಮಣಿಪಾಲದಿಂದ ಉಡುಪಿ, ಮಂಗಳೂರು, ಹಾಸನ ಮಾರ್ಗವಾಗಿ ಬೆಂಗಳೂರಿಗೆ ಹಗಲು ವೇಳೆಯಲ್ಲಿ ಕ್ಲಬ್ ಕ್ಲಾಸ್ ವೋಲ್ವೋ ಸಾರಿಗೆ ಸೌಲಭ್ಯವನ್ನು ಜನವರಿ 30 ರಿಂದ ಆರಂಭಿಸಲಾಗುವುದು.

ಮಣಿಪಾಲದಿಂದ ಬೆಳಗ್ಗೆ 9.15 ಕ್ಕೆ ಹೊರಟು ಉಡುಪಿ, ಮಂಗಳೂರು, ಹಾಸನ ಮಾರ್ಗವಾಗಿ ಸಂಜೆ 6 ಗಂಟೆಗೆ ಬೆಂಗಳೂರು ತಲುಪಲಿದೆ. ಮರು ಪ್ರಯಾಣದಲ್ಲಿ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ಹೊರಟು ಹಾಸನ, ಮಂಗಳೂರು, ಉಡುಪಿ ಮಾರ್ಗವಾಗಿ ಸಂಜೆ 4.30 ಕ್ಕೆ ಮಣಿಪಾಲ ತಲುಪಲಿದೆ.

ಸುರತ್ಕಲ್ : ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ -Vishwanews24

ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್‌ಒಪಿ ರಲ್ಲಿಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಸದರಿ ಸಾರಿಗೆಯ ಸದುಪಯೋಗ ಪಡೆದುಕೊಳ್ಳುವಂತೆ ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರ ಪ್ರಕ್ರಿಯೆಗೆ ಸಂಬಂಧಿಸಿ ಗರ್ಭಗುಡಿಯ ಪಾದುಕಾನ್ಯಾಸ ಕಾರ್ಯಕ್ರಮ -Vishwanews24