ಉಡುಪಿ ನಗರಸಭೆಯಲ್ಲಿ ಆಡಳಿತಾಧಿಕಾರಿಗಳ ಅವಧಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ಕುಡಿಯುವ ನೀರಿನ ವಿಪರೀತ ಬೆಲೆ ಏರಿಕೆ, ಕಳಪೆ ಕಾಮಗಾರಿ, ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ಹಾಗೂ ಕಚೇರಿಯಲ್ಲಿ ಮಿತಿಮೀರಿದ ದಲ್ಲಾಳಿಗಳ ಹಾವಳಿಯನ್ನು ವಿರೋಧಿಸಿ ನಗರ ಬಿಜೆಪಿ ವತಿಯಿಂದ ನಗರ ಸಭಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದ್ದಾರೆ.
ನಗರಸಭೆಯ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದ್ದು, ನಗರಸಭಾ ಕಚೇರಿಯನ್ನು ಕಾಂಗ್ರೆಸ್ ಪಕ್ಷದ ಕಚೇರಿಯನ್ನಾಗಿ ಮಾಡಿಕೊಂಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದೇ ದಿವ್ಯ ನಿರ್ಲಕ್ಷ್ಯವಹಿಸುತ್ತಿದ್ದು ಅಧಿಕಾರಿಗಳು ರಾಜಾರೋಷವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಾರ್ವಜನಿಕರು ತಮ್ಮ ದಿನನಿತ್ಯದ ಕೆಲಸಗಳಿಗೆ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿಭಟನೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರಸಭಾ ಸದಸ್ಯರು, ಪಕ್ಷದ ಮುಖಂಡರು, ಸಾರ್ವಜನಿಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…