Featured

ಟರ್ಕಿ ಭೂಕಂಪ : ಅವಶೇಷಗಳಡಿ 17 ಗಂಟೆ ಕಾಲ ಆಸರೆ ನೀಡಿ ತಮ್ಮನನ್ನು ರಕ್ಷಿಸಿದ 7 ವರ್ಷದ ಪುಟ್ಟ ಬಾಲಕಿಯ ಫೋಟೋ ವೈರಲ್ – Vishwanews24

ಟರ್ಕಿ ಭೂಕಂಪ : ಅವಶೇಷಗಳಡಿ 17 ಗಂಟೆ ಕಾಲ ಆಸರೆ ನೀಡಿ ತಮ್ಮನನ್ನು ರಕ್ಷಿಸಿದ 7 ವರ್ಷದ ಪುಟ್ಟ ಬಾಲಕಿಯ ಫೋಟೋ ವೈರಲ್

ಟರ್ಕಿ: ಭೂಕಂಪನದಿಂದ ನಲುಗಿರುವ ಟರ್ಕಿ-ಸಿರಿಯಾದ ಜನರ ಸ್ಥಿತಿ ಪ್ರತಿಯೊಬ್ಬರ ಮನಕಲಕುವಂತಿದೆ. ಅದರಲ್ಲೂ ಪ್ರಸ್ತುತ ವೈರಲ್ ಆಗುತ್ತಿರುವ ಫೋಟೋವೊಂದು ಪುಟ್ಟ ಮಗುವಿನ ಹೃದಯ ವೈಶಾಲ್ಯತೆಗೆ ಹಿಡಿದ ಕನ್ನಡಿಯಂತಿದೆ.

ಭೂಕಂಪನದಿಂದಾಗಿ ಕುಸಿತಗೊಂಡ ಕಟ್ಟಡದ ಅವಶೇಷಗಳಡಿಯಲ್ಲಿ ಅಕ್ಕ ಮತ್ತು ತಮ್ಮ ಇಬ್ಬರೂ ಬಾಕಿಯಾಗಿದ್ದಾರೆ. ಈ ವೇಳೆ ತನ್ನ ತಮ್ಮನಿಗೆ ಏನೂ ಆಗದಿರಲೆಂದು ಅಕ್ಕ ತನ್ನ ಕೈಯನ್ನು ರಕ್ಷಣಾತ್ಮಕವಾಗಿ ಚಾಚಿಕೊಂಡು ಅದರ ಮೇಲೆ ತಮ್ಮನ ತಲೆ ಇಟ್ಟಿರುವ ಫೋಟೋ ಮನಕಲಕುವಂತಿದೆ. ಅತ್ಯಂತ ಕಷ್ಟದ ಸಮಯದಲ್ಲಿಯೂ 7 ವರ್ಷದ ಈ ಪುಟ್ಟ ಬಾಲಕಿ ತನ್ನ ತಮ್ಮನ ರಕ್ಷಣೆಯ ಜವಾಬ್ದಾರಿ ಹೊತ್ತ ಈ ಫೋಟೋ ಭಾವನಾತ್ಮಕವಾಗಿದೆ.

ಫೋಟೋವನ್ನು ವಿಶ್ವಸಂಸ್ಥೆ ಪ್ರತಿನಿಧಿ ಮೊಹಮ್ಮದ್​ ಸಫಾ ಎಂಬುವವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಅಕ್ಕ ಮತ್ತು ತಮ್ಮ 17 ಗಂಟೆ ಕಾಲ ಈ ಸ್ಥಿತಿಯಲ್ಲಿ ಕಳೆದಿದ್ದಾರೆ. ಬಳಿಕ ಅವರಿಬ್ಬರನ್ನೂ ರಕ್ಷಿಸಲಾಯಿತು ಎಂದು ತಿಳಿಸಿದ್ದಾರೆ.

ಸಾವು, ಕಟ್ಟಡ ಕುಸಿತಗಳಂತಹ ನಕಾರಾತ್ಮಕ ಫೋಟೋಗಳನ್ನೇ ನಾವು ಶೇರ್ ಮಾಡುತ್ತೇವೆ. ಆದರೆ ಇಂತಹ ಫೋಟೋಗಳನ್ನು ಶೇರ್ ಮಾಡುವುದನ್ನು ಮರೆಯಬಾರದು ಎಂದವರು ಇದೇ ವೇಳೆ ಬರೆದುಕೊಂಡಿದ್ದಾರೆ. ಇನ್ನು ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಿಜಕ್ಕೂ ಇದೊಂದು ಪವಾಡ ಎಂದು ನೆಟ್ಟಿಗರು ಬರೆದಿದ್ದಾರೆ. ಆ ಬಾಲಕಿ ಪುಟ್ಟ ಹೀರೋ ಎಂಬುದಾಗಿಯೂ ಕಮೆಂಟ್ ಮಾಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago