Featured

ಟರ್ಕಿ ಭೂಕಂಪ : ಅವಶೇಷಗಳಡಿ 17 ಗಂಟೆ ಕಾಲ ಆಸರೆ ನೀಡಿ ತಮ್ಮನನ್ನು ರಕ್ಷಿಸಿದ 7 ವರ್ಷದ ಪುಟ್ಟ ಬಾಲಕಿಯ ಫೋಟೋ ವೈರಲ್ – Vishwanews24

ಟರ್ಕಿ ಭೂಕಂಪ : ಅವಶೇಷಗಳಡಿ 17 ಗಂಟೆ ಕಾಲ ಆಸರೆ ನೀಡಿ ತಮ್ಮನನ್ನು ರಕ್ಷಿಸಿದ 7 ವರ್ಷದ ಪುಟ್ಟ ಬಾಲಕಿಯ ಫೋಟೋ ವೈರಲ್

ಟರ್ಕಿ: ಭೂಕಂಪನದಿಂದ ನಲುಗಿರುವ ಟರ್ಕಿ-ಸಿರಿಯಾದ ಜನರ ಸ್ಥಿತಿ ಪ್ರತಿಯೊಬ್ಬರ ಮನಕಲಕುವಂತಿದೆ. ಅದರಲ್ಲೂ ಪ್ರಸ್ತುತ ವೈರಲ್ ಆಗುತ್ತಿರುವ ಫೋಟೋವೊಂದು ಪುಟ್ಟ ಮಗುವಿನ ಹೃದಯ ವೈಶಾಲ್ಯತೆಗೆ ಹಿಡಿದ ಕನ್ನಡಿಯಂತಿದೆ.

ಭೂಕಂಪನದಿಂದಾಗಿ ಕುಸಿತಗೊಂಡ ಕಟ್ಟಡದ ಅವಶೇಷಗಳಡಿಯಲ್ಲಿ ಅಕ್ಕ ಮತ್ತು ತಮ್ಮ ಇಬ್ಬರೂ ಬಾಕಿಯಾಗಿದ್ದಾರೆ. ಈ ವೇಳೆ ತನ್ನ ತಮ್ಮನಿಗೆ ಏನೂ ಆಗದಿರಲೆಂದು ಅಕ್ಕ ತನ್ನ ಕೈಯನ್ನು ರಕ್ಷಣಾತ್ಮಕವಾಗಿ ಚಾಚಿಕೊಂಡು ಅದರ ಮೇಲೆ ತಮ್ಮನ ತಲೆ ಇಟ್ಟಿರುವ ಫೋಟೋ ಮನಕಲಕುವಂತಿದೆ. ಅತ್ಯಂತ ಕಷ್ಟದ ಸಮಯದಲ್ಲಿಯೂ 7 ವರ್ಷದ ಈ ಪುಟ್ಟ ಬಾಲಕಿ ತನ್ನ ತಮ್ಮನ ರಕ್ಷಣೆಯ ಜವಾಬ್ದಾರಿ ಹೊತ್ತ ಈ ಫೋಟೋ ಭಾವನಾತ್ಮಕವಾಗಿದೆ.

ಫೋಟೋವನ್ನು ವಿಶ್ವಸಂಸ್ಥೆ ಪ್ರತಿನಿಧಿ ಮೊಹಮ್ಮದ್​ ಸಫಾ ಎಂಬುವವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಅಕ್ಕ ಮತ್ತು ತಮ್ಮ 17 ಗಂಟೆ ಕಾಲ ಈ ಸ್ಥಿತಿಯಲ್ಲಿ ಕಳೆದಿದ್ದಾರೆ. ಬಳಿಕ ಅವರಿಬ್ಬರನ್ನೂ ರಕ್ಷಿಸಲಾಯಿತು ಎಂದು ತಿಳಿಸಿದ್ದಾರೆ.

ಸಾವು, ಕಟ್ಟಡ ಕುಸಿತಗಳಂತಹ ನಕಾರಾತ್ಮಕ ಫೋಟೋಗಳನ್ನೇ ನಾವು ಶೇರ್ ಮಾಡುತ್ತೇವೆ. ಆದರೆ ಇಂತಹ ಫೋಟೋಗಳನ್ನು ಶೇರ್ ಮಾಡುವುದನ್ನು ಮರೆಯಬಾರದು ಎಂದವರು ಇದೇ ವೇಳೆ ಬರೆದುಕೊಂಡಿದ್ದಾರೆ. ಇನ್ನು ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಿಜಕ್ಕೂ ಇದೊಂದು ಪವಾಡ ಎಂದು ನೆಟ್ಟಿಗರು ಬರೆದಿದ್ದಾರೆ. ಆ ಬಾಲಕಿ ಪುಟ್ಟ ಹೀರೋ ಎಂಬುದಾಗಿಯೂ ಕಮೆಂಟ್ ಮಾಡಿದ್ದಾರೆ.

Vishwa News 24

Recent Posts

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

23 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

43 minutes ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

23 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

24 hours ago