Featured

ಟರ್ಕಿ ಭೂಕಂಪ : ಅವಶೇಷಗಳಡಿ 17 ಗಂಟೆ ಕಾಲ ಆಸರೆ ನೀಡಿ ತಮ್ಮನನ್ನು ರಕ್ಷಿಸಿದ 7 ವರ್ಷದ ಪುಟ್ಟ ಬಾಲಕಿಯ ಫೋಟೋ ವೈರಲ್ – Vishwanews24

ಟರ್ಕಿ ಭೂಕಂಪ : ಅವಶೇಷಗಳಡಿ 17 ಗಂಟೆ ಕಾಲ ಆಸರೆ ನೀಡಿ ತಮ್ಮನನ್ನು ರಕ್ಷಿಸಿದ 7 ವರ್ಷದ ಪುಟ್ಟ ಬಾಲಕಿಯ ಫೋಟೋ ವೈರಲ್

ಟರ್ಕಿ: ಭೂಕಂಪನದಿಂದ ನಲುಗಿರುವ ಟರ್ಕಿ-ಸಿರಿಯಾದ ಜನರ ಸ್ಥಿತಿ ಪ್ರತಿಯೊಬ್ಬರ ಮನಕಲಕುವಂತಿದೆ. ಅದರಲ್ಲೂ ಪ್ರಸ್ತುತ ವೈರಲ್ ಆಗುತ್ತಿರುವ ಫೋಟೋವೊಂದು ಪುಟ್ಟ ಮಗುವಿನ ಹೃದಯ ವೈಶಾಲ್ಯತೆಗೆ ಹಿಡಿದ ಕನ್ನಡಿಯಂತಿದೆ.

ಭೂಕಂಪನದಿಂದಾಗಿ ಕುಸಿತಗೊಂಡ ಕಟ್ಟಡದ ಅವಶೇಷಗಳಡಿಯಲ್ಲಿ ಅಕ್ಕ ಮತ್ತು ತಮ್ಮ ಇಬ್ಬರೂ ಬಾಕಿಯಾಗಿದ್ದಾರೆ. ಈ ವೇಳೆ ತನ್ನ ತಮ್ಮನಿಗೆ ಏನೂ ಆಗದಿರಲೆಂದು ಅಕ್ಕ ತನ್ನ ಕೈಯನ್ನು ರಕ್ಷಣಾತ್ಮಕವಾಗಿ ಚಾಚಿಕೊಂಡು ಅದರ ಮೇಲೆ ತಮ್ಮನ ತಲೆ ಇಟ್ಟಿರುವ ಫೋಟೋ ಮನಕಲಕುವಂತಿದೆ. ಅತ್ಯಂತ ಕಷ್ಟದ ಸಮಯದಲ್ಲಿಯೂ 7 ವರ್ಷದ ಈ ಪುಟ್ಟ ಬಾಲಕಿ ತನ್ನ ತಮ್ಮನ ರಕ್ಷಣೆಯ ಜವಾಬ್ದಾರಿ ಹೊತ್ತ ಈ ಫೋಟೋ ಭಾವನಾತ್ಮಕವಾಗಿದೆ.

ಫೋಟೋವನ್ನು ವಿಶ್ವಸಂಸ್ಥೆ ಪ್ರತಿನಿಧಿ ಮೊಹಮ್ಮದ್​ ಸಫಾ ಎಂಬುವವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಅಕ್ಕ ಮತ್ತು ತಮ್ಮ 17 ಗಂಟೆ ಕಾಲ ಈ ಸ್ಥಿತಿಯಲ್ಲಿ ಕಳೆದಿದ್ದಾರೆ. ಬಳಿಕ ಅವರಿಬ್ಬರನ್ನೂ ರಕ್ಷಿಸಲಾಯಿತು ಎಂದು ತಿಳಿಸಿದ್ದಾರೆ.

ಸಾವು, ಕಟ್ಟಡ ಕುಸಿತಗಳಂತಹ ನಕಾರಾತ್ಮಕ ಫೋಟೋಗಳನ್ನೇ ನಾವು ಶೇರ್ ಮಾಡುತ್ತೇವೆ. ಆದರೆ ಇಂತಹ ಫೋಟೋಗಳನ್ನು ಶೇರ್ ಮಾಡುವುದನ್ನು ಮರೆಯಬಾರದು ಎಂದವರು ಇದೇ ವೇಳೆ ಬರೆದುಕೊಂಡಿದ್ದಾರೆ. ಇನ್ನು ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಿಜಕ್ಕೂ ಇದೊಂದು ಪವಾಡ ಎಂದು ನೆಟ್ಟಿಗರು ಬರೆದಿದ್ದಾರೆ. ಆ ಬಾಲಕಿ ಪುಟ್ಟ ಹೀರೋ ಎಂಬುದಾಗಿಯೂ ಕಮೆಂಟ್ ಮಾಡಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

17 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

17 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

21 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago