ಮಣಿಪಾಲ : ಚಿಕ್ಕಮಗಳೂರಿನಲ್ಲಿ ನಡೆದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಶೋಭಾ ಕರಂದ್ಲಾಜೆಯವರು ಟಿಕೆಟಿಗಾಗಿ ಯಡಿಯೂರಪ್ಪ ಎನ್ನುತ್ತಾರೆ. ಮತಯಾಚಿಸುವಾಗ ಮೋದಿ ಎನ್ನುತ್ತಾರೆ. ಕೆಲಸ ಮಾಡುವ ಸಂಸದರು ಬೇಕೇ ಅಥವಾ ಕೆಲಸ ಮಾಡದವರು ಬೇಕೇ ಎಂಬುದನ್ನು ನಿರ್ಧರಿಸುವ ಕಾಲವಿದು. ಕ್ಷೇತ್ರದ ಜನತೆಗೆ ಅಭಿವೃದ್ಧಿ ಪಡಿಸುವ ಓರ್ವ ಸಂಸದ ಬೇಕು, ಕೆಲಸ ಮಾಡುವ ಪ್ರತಿನಿಧಿ ಬೇಕು ಎಂದು ಹೇಳಿದರು.
ಮರಳಿನ ಸಮಸ್ಯೆಗೆ ನಾನು ಕಾರಣ ಎಂಬುದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ನಾನು ಮಂತ್ರಿಯಾಗಿದ್ದ ಸಂದರ್ಭ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ಮಾಡಬಾರದು ಎಂಬ ತಡೆಯಾಜ್ಞೆ ಇತ್ತು. ಆಗ ನಾನು ಕಾನೂನು ಸಚಿವ ಜಯಚಂದ್ರ ಹಾಗೂ ಸರಕಾರದ ವಕೀಲರಾದ ಅಶೋಕ್ ದೇವರಾಜ್ ಅವರಲ್ಲಿ ಚರ್ಚಿಸಿ ಶೋಭಾ ಕರಂದ್ಲಾಜೆಯವರಲ್ಲಿ ಕೇಂದ್ರ ಸರಕಾರದಿಂದ ಅಫಿದವಿತ್ ಸಲ್ಲಿಸುವಂತೆ ಕೇಳಿಕೊಂಡಿದ್ದೆ. ಆದರೆ ಅವರ ನಿರ್ಲಕ್ಷ್ಯದಿಂದಾಗಿ ಅಧಿಕಾರಿಗಳೇ ಹೋಗಿ ಅಫಿದವಿತ್ ಸಲ್ಲಿಸಿದರು. ತದನಂತರ ತಡೆಯಾಜ್ಞೆ ತೆರವುಗೊಳಿಸಿ ಹೊಸ ಪರವಾನಿಗೆ ಕೊಡುವಂತೆ ಆದೇಶಿಸಿ ಉಡುಪಿ ಜಿಲ್ಲೆಯಲ್ಲಿ 9 ಲಕ್ಷ ಟನ್ ಮರಳನ್ನು ತೆಗೆಯಲು ನಾನು ಅವಕಾಶ ಮಾಡಿಕೊಟ್ಟೆ. ಅದರಲ್ಲಿ 6 ಲಕ್ಷ ಟನ್ ಮರಳು ತೆಗೆಯಲು ಸಾಧ್ಯವಾಯಿತು ಎಂದು ತಿಳಿಸಿದರು.
ನನ್ನ ಕಾಲದಲ್ಲಿ 28 ಬ್ಲಾಕಿನಲ್ಲಿ 165 ಜನರಿಗೆ ಮರಳು ತೆಗೆಯಲು ಪರವಾನಿಗೆ ಕೊಡುವ ಕೆಲಸವೂ ಆಯಿತು. ಜಿಲ್ಲೆಯ ಮರಳು ಜಿಲ್ಲೆಗೆ ಮಾತ್ರ ಎಂಬ ಕಾನೂನು ಮಾಡಿದೆ ಎಂದು ಹೇಳಿದರು.
ಕೇಂದ್ರ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇದಿತ ಎಂದಿದೆ. ಈ ತಿದ್ದುಪಡಿಯನ್ನು ಶೋಭಾ ಕರಂದ್ಲಾಜೆ ಮಾಡಿಸಬೇಕಿತ್ತು. ಅದರೆ ಅವರು ಮಾಡಲಿಲ್ಲ. ಹಾಗಾಗಿ ಇದು ನನ್ನ ವೈಫಲ್ಯ ಅಲ್ಲ, ಬದಲಾಗಿ ಶೋಭಾರ ವೈಫಲ್ಯ ಎಂದು ಆರೋಪಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…