Featured

ಟಿಕೆಟ್‌ಗೆ ಯಡಿಯೂರಪ್ಪ,ಮತಯಾಚಿಸುವಾಗ ಮೋದಿ ಎನ್ನುತ್ತಾರೆ : ಶೋಭಾ ಕರಂದ್ಲಾಜೆಗೆ ಪ್ರಮೋದ್‌ ಮಧ್ವರಾಜ್ – Vishwanews24

ಮಣಿಪಾಲ :  ಚಿಕ್ಕಮಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಶೋಭಾ ಕರಂದ್ಲಾಜೆಯವರು ಟಿಕೆಟಿಗಾಗಿ ಯಡಿಯೂರಪ್ಪ ಎನ್ನುತ್ತಾರೆ. ಮತಯಾಚಿಸುವಾಗ ಮೋದಿ ಎನ್ನುತ್ತಾರೆ. ಕೆಲಸ ಮಾಡುವ ಸಂಸದರು ಬೇಕೇ ಅಥವಾ ಕೆಲಸ ಮಾಡದವರು ಬೇಕೇ ಎಂಬುದನ್ನು ನಿರ್ಧರಿಸುವ ಕಾಲವಿದು. ಕ್ಷೇತ್ರದ ಜನತೆಗೆ ಅಭಿವೃದ್ಧಿ ಪಡಿಸುವ ಓರ್ವ ಸಂಸದ ಬೇಕು, ಕೆಲಸ ಮಾಡುವ ಪ್ರತಿನಿಧಿ ಬೇಕು ಎಂದು ಹೇಳಿದರು.

ಮರಳಿನ ಸಮಸ್ಯೆಗೆ ನಾನು ಕಾರಣ ಎಂಬುದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ನಾನು ಮಂತ್ರಿಯಾಗಿದ್ದ ಸಂದರ್ಭ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ಮಾಡಬಾರದು ಎಂಬ ತಡೆಯಾಜ್ಞೆ ಇತ್ತು. ಆಗ ನಾನು ಕಾನೂನು ಸಚಿವ ಜಯಚಂದ್ರ ಹಾಗೂ ಸರಕಾರದ ವಕೀಲರಾದ ಅಶೋಕ್‌ ದೇವರಾಜ್‌ ಅವರಲ್ಲಿ ಚರ್ಚಿಸಿ ಶೋಭಾ ಕರಂದ್ಲಾಜೆಯವರಲ್ಲಿ ಕೇಂದ್ರ ಸರಕಾರದಿಂದ ಅಫಿದವಿತ್‌ ಸಲ್ಲಿಸುವಂತೆ ಕೇಳಿಕೊಂಡಿದ್ದೆ. ಆದರೆ ಅವರ ನಿರ್ಲಕ್ಷ್ಯದಿಂದಾಗಿ ಅಧಿಕಾರಿಗಳೇ ಹೋಗಿ ಅಫಿದವಿತ್‌ ಸಲ್ಲಿಸಿದರು. ತದನಂತರ ತಡೆಯಾಜ್ಞೆ ತೆರವುಗೊಳಿಸಿ ಹೊಸ ಪರವಾನಿಗೆ ಕೊಡುವಂತೆ ಆದೇಶಿಸಿ ಉಡುಪಿ ಜಿಲ್ಲೆಯಲ್ಲಿ 9 ಲಕ್ಷ ಟನ್‌ ಮರಳನ್ನು ತೆಗೆಯಲು ನಾನು ಅವಕಾಶ ಮಾಡಿಕೊಟ್ಟೆ. ಅದರಲ್ಲಿ 6 ಲಕ್ಷ ಟನ್‌ ಮರಳು ತೆಗೆಯಲು ಸಾಧ್ಯವಾಯಿತು ಎಂದು ತಿಳಿಸಿದರು.

ನನ್ನ ಕಾಲದಲ್ಲಿ 28 ಬ್ಲಾಕಿನಲ್ಲಿ 165 ಜನರಿಗೆ ಮರಳು ತೆಗೆಯಲು ಪರವಾನಿಗೆ ಕೊಡುವ ಕೆಲಸವೂ ಆಯಿತು. ಜಿಲ್ಲೆಯ ಮರಳು ಜಿಲ್ಲೆಗೆ ಮಾತ್ರ ಎಂಬ ಕಾನೂನು ಮಾಡಿದೆ ಎಂದು ಹೇಳಿದರು.

ಕೇಂದ್ರ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇದಿತ ಎಂದಿದೆ. ಈ ತಿದ್ದುಪಡಿಯನ್ನು ಶೋಭಾ ಕರಂದ್ಲಾಜೆ ಮಾಡಿಸಬೇಕಿತ್ತು. ಅದರೆ ಅವರು ಮಾಡಲಿಲ್ಲ. ಹಾಗಾಗಿ ಇದು ನನ್ನ ವೈಫ‌ಲ್ಯ ಅಲ್ಲ, ಬದಲಾಗಿ ಶೋಭಾರ ವೈಫ‌ಲ್ಯ ಎಂದು ಆರೋಪಿಸಿದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

17 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

17 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago