Featured

ಟಿಕೆಟ್‌ಗೆ ಯಡಿಯೂರಪ್ಪ,ಮತಯಾಚಿಸುವಾಗ ಮೋದಿ ಎನ್ನುತ್ತಾರೆ : ಶೋಭಾ ಕರಂದ್ಲಾಜೆಗೆ ಪ್ರಮೋದ್‌ ಮಧ್ವರಾಜ್ – Vishwanews24

ಮಣಿಪಾಲ :  ಚಿಕ್ಕಮಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಶೋಭಾ ಕರಂದ್ಲಾಜೆಯವರು ಟಿಕೆಟಿಗಾಗಿ ಯಡಿಯೂರಪ್ಪ ಎನ್ನುತ್ತಾರೆ. ಮತಯಾಚಿಸುವಾಗ ಮೋದಿ ಎನ್ನುತ್ತಾರೆ. ಕೆಲಸ ಮಾಡುವ ಸಂಸದರು ಬೇಕೇ ಅಥವಾ ಕೆಲಸ ಮಾಡದವರು ಬೇಕೇ ಎಂಬುದನ್ನು ನಿರ್ಧರಿಸುವ ಕಾಲವಿದು. ಕ್ಷೇತ್ರದ ಜನತೆಗೆ ಅಭಿವೃದ್ಧಿ ಪಡಿಸುವ ಓರ್ವ ಸಂಸದ ಬೇಕು, ಕೆಲಸ ಮಾಡುವ ಪ್ರತಿನಿಧಿ ಬೇಕು ಎಂದು ಹೇಳಿದರು.

ಮರಳಿನ ಸಮಸ್ಯೆಗೆ ನಾನು ಕಾರಣ ಎಂಬುದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ನಾನು ಮಂತ್ರಿಯಾಗಿದ್ದ ಸಂದರ್ಭ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ಮಾಡಬಾರದು ಎಂಬ ತಡೆಯಾಜ್ಞೆ ಇತ್ತು. ಆಗ ನಾನು ಕಾನೂನು ಸಚಿವ ಜಯಚಂದ್ರ ಹಾಗೂ ಸರಕಾರದ ವಕೀಲರಾದ ಅಶೋಕ್‌ ದೇವರಾಜ್‌ ಅವರಲ್ಲಿ ಚರ್ಚಿಸಿ ಶೋಭಾ ಕರಂದ್ಲಾಜೆಯವರಲ್ಲಿ ಕೇಂದ್ರ ಸರಕಾರದಿಂದ ಅಫಿದವಿತ್‌ ಸಲ್ಲಿಸುವಂತೆ ಕೇಳಿಕೊಂಡಿದ್ದೆ. ಆದರೆ ಅವರ ನಿರ್ಲಕ್ಷ್ಯದಿಂದಾಗಿ ಅಧಿಕಾರಿಗಳೇ ಹೋಗಿ ಅಫಿದವಿತ್‌ ಸಲ್ಲಿಸಿದರು. ತದನಂತರ ತಡೆಯಾಜ್ಞೆ ತೆರವುಗೊಳಿಸಿ ಹೊಸ ಪರವಾನಿಗೆ ಕೊಡುವಂತೆ ಆದೇಶಿಸಿ ಉಡುಪಿ ಜಿಲ್ಲೆಯಲ್ಲಿ 9 ಲಕ್ಷ ಟನ್‌ ಮರಳನ್ನು ತೆಗೆಯಲು ನಾನು ಅವಕಾಶ ಮಾಡಿಕೊಟ್ಟೆ. ಅದರಲ್ಲಿ 6 ಲಕ್ಷ ಟನ್‌ ಮರಳು ತೆಗೆಯಲು ಸಾಧ್ಯವಾಯಿತು ಎಂದು ತಿಳಿಸಿದರು.

ನನ್ನ ಕಾಲದಲ್ಲಿ 28 ಬ್ಲಾಕಿನಲ್ಲಿ 165 ಜನರಿಗೆ ಮರಳು ತೆಗೆಯಲು ಪರವಾನಿಗೆ ಕೊಡುವ ಕೆಲಸವೂ ಆಯಿತು. ಜಿಲ್ಲೆಯ ಮರಳು ಜಿಲ್ಲೆಗೆ ಮಾತ್ರ ಎಂಬ ಕಾನೂನು ಮಾಡಿದೆ ಎಂದು ಹೇಳಿದರು.

ಕೇಂದ್ರ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇದಿತ ಎಂದಿದೆ. ಈ ತಿದ್ದುಪಡಿಯನ್ನು ಶೋಭಾ ಕರಂದ್ಲಾಜೆ ಮಾಡಿಸಬೇಕಿತ್ತು. ಅದರೆ ಅವರು ಮಾಡಲಿಲ್ಲ. ಹಾಗಾಗಿ ಇದು ನನ್ನ ವೈಫ‌ಲ್ಯ ಅಲ್ಲ, ಬದಲಾಗಿ ಶೋಭಾರ ವೈಫ‌ಲ್ಯ ಎಂದು ಆರೋಪಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago