Featured

ಟಿಕೆಟ್‌ಗೆ ಯಡಿಯೂರಪ್ಪ,ಮತಯಾಚಿಸುವಾಗ ಮೋದಿ ಎನ್ನುತ್ತಾರೆ : ಶೋಭಾ ಕರಂದ್ಲಾಜೆಗೆ ಪ್ರಮೋದ್‌ ಮಧ್ವರಾಜ್ – Vishwanews24

ಮಣಿಪಾಲ :  ಚಿಕ್ಕಮಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಶೋಭಾ ಕರಂದ್ಲಾಜೆಯವರು ಟಿಕೆಟಿಗಾಗಿ ಯಡಿಯೂರಪ್ಪ ಎನ್ನುತ್ತಾರೆ. ಮತಯಾಚಿಸುವಾಗ ಮೋದಿ ಎನ್ನುತ್ತಾರೆ. ಕೆಲಸ ಮಾಡುವ ಸಂಸದರು ಬೇಕೇ ಅಥವಾ ಕೆಲಸ ಮಾಡದವರು ಬೇಕೇ ಎಂಬುದನ್ನು ನಿರ್ಧರಿಸುವ ಕಾಲವಿದು. ಕ್ಷೇತ್ರದ ಜನತೆಗೆ ಅಭಿವೃದ್ಧಿ ಪಡಿಸುವ ಓರ್ವ ಸಂಸದ ಬೇಕು, ಕೆಲಸ ಮಾಡುವ ಪ್ರತಿನಿಧಿ ಬೇಕು ಎಂದು ಹೇಳಿದರು.

ಮರಳಿನ ಸಮಸ್ಯೆಗೆ ನಾನು ಕಾರಣ ಎಂಬುದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ನಾನು ಮಂತ್ರಿಯಾಗಿದ್ದ ಸಂದರ್ಭ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ಮಾಡಬಾರದು ಎಂಬ ತಡೆಯಾಜ್ಞೆ ಇತ್ತು. ಆಗ ನಾನು ಕಾನೂನು ಸಚಿವ ಜಯಚಂದ್ರ ಹಾಗೂ ಸರಕಾರದ ವಕೀಲರಾದ ಅಶೋಕ್‌ ದೇವರಾಜ್‌ ಅವರಲ್ಲಿ ಚರ್ಚಿಸಿ ಶೋಭಾ ಕರಂದ್ಲಾಜೆಯವರಲ್ಲಿ ಕೇಂದ್ರ ಸರಕಾರದಿಂದ ಅಫಿದವಿತ್‌ ಸಲ್ಲಿಸುವಂತೆ ಕೇಳಿಕೊಂಡಿದ್ದೆ. ಆದರೆ ಅವರ ನಿರ್ಲಕ್ಷ್ಯದಿಂದಾಗಿ ಅಧಿಕಾರಿಗಳೇ ಹೋಗಿ ಅಫಿದವಿತ್‌ ಸಲ್ಲಿಸಿದರು. ತದನಂತರ ತಡೆಯಾಜ್ಞೆ ತೆರವುಗೊಳಿಸಿ ಹೊಸ ಪರವಾನಿಗೆ ಕೊಡುವಂತೆ ಆದೇಶಿಸಿ ಉಡುಪಿ ಜಿಲ್ಲೆಯಲ್ಲಿ 9 ಲಕ್ಷ ಟನ್‌ ಮರಳನ್ನು ತೆಗೆಯಲು ನಾನು ಅವಕಾಶ ಮಾಡಿಕೊಟ್ಟೆ. ಅದರಲ್ಲಿ 6 ಲಕ್ಷ ಟನ್‌ ಮರಳು ತೆಗೆಯಲು ಸಾಧ್ಯವಾಯಿತು ಎಂದು ತಿಳಿಸಿದರು.

ನನ್ನ ಕಾಲದಲ್ಲಿ 28 ಬ್ಲಾಕಿನಲ್ಲಿ 165 ಜನರಿಗೆ ಮರಳು ತೆಗೆಯಲು ಪರವಾನಿಗೆ ಕೊಡುವ ಕೆಲಸವೂ ಆಯಿತು. ಜಿಲ್ಲೆಯ ಮರಳು ಜಿಲ್ಲೆಗೆ ಮಾತ್ರ ಎಂಬ ಕಾನೂನು ಮಾಡಿದೆ ಎಂದು ಹೇಳಿದರು.

ಕೇಂದ್ರ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇದಿತ ಎಂದಿದೆ. ಈ ತಿದ್ದುಪಡಿಯನ್ನು ಶೋಭಾ ಕರಂದ್ಲಾಜೆ ಮಾಡಿಸಬೇಕಿತ್ತು. ಅದರೆ ಅವರು ಮಾಡಲಿಲ್ಲ. ಹಾಗಾಗಿ ಇದು ನನ್ನ ವೈಫ‌ಲ್ಯ ಅಲ್ಲ, ಬದಲಾಗಿ ಶೋಭಾರ ವೈಫ‌ಲ್ಯ ಎಂದು ಆರೋಪಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago