ಉಡುಪಿ: ಉಡುಪಿಯಲ್ಲಿ ನಡೆದ ಗಾಂಧೀಜಿ 150ರ ಸಮಾವೇಶಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹಲವಾರು ವಿಚಾರ ಇಟ್ಟುಕೊಂಡು ಬಿಜೆಪಿಯ ನಾಯಕರ ಮೇಲೆ ಮಾತಿನ ಪ್ರಹಾರ ಮಾಡಿದರು.
ಬಿಜೆಪಿಯವರು ಟಿಪ್ಪು ವಿಚಾರವನ್ನು ಪಠ್ಯಕ್ರಮದಿಂದ ತೆಗೆಯುತ್ತಾರೆ. ಇದರಿಂದ ಇತಿಹಾಸವೇ ಅಪೂರ್ಣ ಆಗುತ್ತೆ. ಟಿಪ್ಪು, ಹೈದರಾಲಿ ಇರದ ಮೈಸೂರು ಚರಿತ್ರೆ ಅಪೂರ್ಣ. ಇದೇ ಯಡಿಯೂರಪ್ಪ ಕೆಜೆಪಿ ಕಟ್ಟಿದ್ದಾಗ ಟಿಪ್ಪುವಿನ ಪೇಟ ಹಾಕಿಕೊಂಡು, ಟಿಪ್ಪು ಬಟ್ಟೆ ತೊಟ್ಕೊಂಡು ಪಕ್ಕದಲ್ಲಿ ಶೋಭಾ ನಿಲ್ಲಿಸ್ಕೊಂಡು ಫೊಟೋ ತೆಗಿಸ್ಕೊಂಡಿಲ್ವಾ ಎಂದು ಚಾಟಿ ಬೀಸಿದರು. ಕೆಜೆಪಿಯಲ್ಲಿ ಇದ್ದಾಗ ಇವರಿಗೇನು ಬೇರೆ ನಾಲಿಗೆ ಇತ್ತಾ? ಯಡಿಯೂರಪ್ಪನಿಗೆ ಎಷ್ಟು ನಾಲಿಗೆ ಎಂದು ಪ್ರಶ್ನೆ ಮಾಡಿದ ಮಾಜಿ ಸಿಎಂ, ನಾನು ಟಿಪ್ಪು ಜಯಂತಿ ಮಾತ್ರ ಮಾಡಿಲ್ಲ. ಕಿತ್ತೂರು ರಾಣಿ ಚೆನ್ನಮ್ಮ, ಕೆಂಪೇಗೌಡರ ಜಯಂತಿ ಮಾಡಿದೋನೂ ನಾನೇ ಮಾಡಿರುವುದಾಗಿ ಹೇಳಿದರು.
ಬಿಜೆಪಿಯವರು ನನ್ನ ಬಗ್ಗೆ ಏನೇನೋ ಅಪಪ್ರಚಾರ ಮಾಡುತ್ತಾರೆ. ಸಿದ್ದರಾಮಯ್ಯ ಮುಸಲ್ಮಾನರ ಪರ ಅಂತ ಅಪಪ್ರಚಾರ ಮಾಡುತ್ತಾರೆ. ಯಾಕೆ ನಾನೇನೂ ಹಿಂದೂ ಅಲ್ವಾ. ನಾನೂ ಒಬ್ಬ ಹಿಂದೂ, ಆದರೆ ಇವರ ಹಾಗೆ ಡೋಂಗಿ ಹಿಂದೂವಲ್ಲ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…