ಉಡುಪಿ: ಉಡುಪಿಯಲ್ಲಿ ನಡೆದ ಗಾಂಧೀಜಿ 150ರ ಸಮಾವೇಶಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹಲವಾರು ವಿಚಾರ ಇಟ್ಟುಕೊಂಡು ಬಿಜೆಪಿಯ ನಾಯಕರ ಮೇಲೆ ಮಾತಿನ ಪ್ರಹಾರ ಮಾಡಿದರು.
ಬಿಜೆಪಿಯವರು ಟಿಪ್ಪು ವಿಚಾರವನ್ನು ಪಠ್ಯಕ್ರಮದಿಂದ ತೆಗೆಯುತ್ತಾರೆ. ಇದರಿಂದ ಇತಿಹಾಸವೇ ಅಪೂರ್ಣ ಆಗುತ್ತೆ. ಟಿಪ್ಪು, ಹೈದರಾಲಿ ಇರದ ಮೈಸೂರು ಚರಿತ್ರೆ ಅಪೂರ್ಣ. ಇದೇ ಯಡಿಯೂರಪ್ಪ ಕೆಜೆಪಿ ಕಟ್ಟಿದ್ದಾಗ ಟಿಪ್ಪುವಿನ ಪೇಟ ಹಾಕಿಕೊಂಡು, ಟಿಪ್ಪು ಬಟ್ಟೆ ತೊಟ್ಕೊಂಡು ಪಕ್ಕದಲ್ಲಿ ಶೋಭಾ ನಿಲ್ಲಿಸ್ಕೊಂಡು ಫೊಟೋ ತೆಗಿಸ್ಕೊಂಡಿಲ್ವಾ ಎಂದು ಚಾಟಿ ಬೀಸಿದರು. ಕೆಜೆಪಿಯಲ್ಲಿ ಇದ್ದಾಗ ಇವರಿಗೇನು ಬೇರೆ ನಾಲಿಗೆ ಇತ್ತಾ? ಯಡಿಯೂರಪ್ಪನಿಗೆ ಎಷ್ಟು ನಾಲಿಗೆ ಎಂದು ಪ್ರಶ್ನೆ ಮಾಡಿದ ಮಾಜಿ ಸಿಎಂ, ನಾನು ಟಿಪ್ಪು ಜಯಂತಿ ಮಾತ್ರ ಮಾಡಿಲ್ಲ. ಕಿತ್ತೂರು ರಾಣಿ ಚೆನ್ನಮ್ಮ, ಕೆಂಪೇಗೌಡರ ಜಯಂತಿ ಮಾಡಿದೋನೂ ನಾನೇ ಮಾಡಿರುವುದಾಗಿ ಹೇಳಿದರು.
ಬಿಜೆಪಿಯವರು ನನ್ನ ಬಗ್ಗೆ ಏನೇನೋ ಅಪಪ್ರಚಾರ ಮಾಡುತ್ತಾರೆ. ಸಿದ್ದರಾಮಯ್ಯ ಮುಸಲ್ಮಾನರ ಪರ ಅಂತ ಅಪಪ್ರಚಾರ ಮಾಡುತ್ತಾರೆ. ಯಾಕೆ ನಾನೇನೂ ಹಿಂದೂ ಅಲ್ವಾ. ನಾನೂ ಒಬ್ಬ ಹಿಂದೂ, ಆದರೆ ಇವರ ಹಾಗೆ ಡೋಂಗಿ ಹಿಂದೂವಲ್ಲ ಎಂದು ವಾಗ್ದಾಳಿ ನಡೆಸಿದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…